ಬಳ್ಳಾರಿ : ನನ್ನ ಮತ್ತು ಬಿ. ಶ್ರೀರಾಮುಲು ನಡುವೆ ಯಾರ ಮಧ್ಯಸ್ಥಿಕೆ ಬೇಕಾಗಿಲ್ಲ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಅವರ ಪುತ್ರ ಕಿರೀಟಿ ಅಭಿನಯದ ಚಲನಚಿತ್ರ ಜೂನಿಯರ್ ಸಿನಿಮಾ ಬಿಡುಗಡೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ವೈಮನಸ್ಸು ಶಮನ ಮಾಡಲು ದೆಹಲಿಗೆ ಕರೆದಿರುವ ಕುರಿತು ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮಿಬ್ಬರ ಮಧ್ಯೆ ಯಾರೂ ಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.
ತಮ್ಮ ಮತ್ತು ರಾಮುಲು ಸ್ನೇಹದ ಬಗ್ಗೆ ಈಗ ಮಾತನಾಡೋದು ಬೇಡ ಎಂದು ಹೇಳಿದ ಅವರು, ಯಾವುದೇ ವಿಚಾರದಲ್ಲಿ ಪ್ರೀತಿ ಅಭಿಮಾನ ಅನ್ನೋದು ಒಂದು ಘಟನೆಯಿಂದ ಬದಲಾವಣೆ ಆಗಲ್ಲ. ನಮ್ಮ ಹಾಗೂ ರಾಮುಲು ನಡುವಿನ ಸ್ನೇಹ ಸಾಮಾನ್ಯವಾದುದ್ದಲ್ಲ, ಹದಿನೈದು ಹದಿನಾರು ವಯಸ್ಸಿನವರಾಗಿದ್ದಾಗಿಂದ ಸ್ನೇಹ ಇದೆ. ನಲವತ್ತು ವರ್ಷದಿಂದ ಜೊತೆಗಿದ್ದೇವೆ. ಶೀಘ್ರದಲ್ಲಿ ರಾಮುಲು ನಾನು ಇಬ್ಬರು ಒಟ್ಟಿಗೆ ಜೂನಿಯರ್ ಸಿನಿಮಾ ನೋಡ್ತೇವೆ ಎಂದು ಹೇಳಿದರು.
ಸಹೋದರ ಸೋಮಶೇಖರ್ ರೆಡ್ಡಿ, ಪತ್ನಿ ಅರುಣಾ, ಮಗ ಕಿರಿಟಿ ಜೊತೆಗೆ ಸಿನಿಮಾ ನೋಡಿದ ಜನಾರ್ದನ ರೆಡ್ಡಿ ಸಿನಿಮಾ ಅದ್ಭುತವಾಗಿದೆ ಎಂದಿದ್ದಾರೆ. ಕಿರೀಟಿಗೆ ಚಿಕ್ಕವನಿದ್ದಾಗಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇತ್ತು. ಮನೆಯಲ್ಲಿ ಎಷ್ಟೇ ರಾಜಕೀಯ ಇದ್ರೂ, ಮಗ ಸಿನಿಮಾ ಬಿಟ್ಟರೆ ಯಾವುದರ ಬಗ್ಗೆಯೂ ಕಾನ್ಸಂಟ್ರೇಶನ್ ಮಾಡುತ್ತಿರಲಿಲ್ಲ. ಕಿರೀಟಿ ಪುನೀತ್ ರಾಜ್ಕುಮಾರ್ ಮತ್ತು ಎನ್ಟಿಆರ್ ಅವರನ್ನು ನೋಡಿಕೊಂಡು ಬೆಳೆದಿದ್ದಾನೆ. ಜೂನಿಯರ್ ಸಿನಿಮಾ ಯಶಸ್ವಿಯಾಗಲಿದೆ ಎಂದು ಈ ಸಂದರ್ಭದಲ್ಲಿ ಅವರು ಭರವಸೆ ವ್ಯಕ್ತಪಡಿಸಿದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…