ಬಳ್ಳಾರಿ : ನನ್ನ ಮತ್ತು ಬಿ. ಶ್ರೀರಾಮುಲು ನಡುವೆ ಯಾರ ಮಧ್ಯಸ್ಥಿಕೆ ಬೇಕಾಗಿಲ್ಲ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಅವರ ಪುತ್ರ ಕಿರೀಟಿ ಅಭಿನಯದ ಚಲನಚಿತ್ರ ಜೂನಿಯರ್ ಸಿನಿಮಾ ಬಿಡುಗಡೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ಅವರ ವೈಮನಸ್ಸು ಶಮನ ಮಾಡಲು ದೆಹಲಿಗೆ ಕರೆದಿರುವ ಕುರಿತು ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮಿಬ್ಬರ ಮಧ್ಯೆ ಯಾರೂ ಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.
ತಮ್ಮ ಮತ್ತು ರಾಮುಲು ಸ್ನೇಹದ ಬಗ್ಗೆ ಈಗ ಮಾತನಾಡೋದು ಬೇಡ ಎಂದು ಹೇಳಿದ ಅವರು, ಯಾವುದೇ ವಿಚಾರದಲ್ಲಿ ಪ್ರೀತಿ ಅಭಿಮಾನ ಅನ್ನೋದು ಒಂದು ಘಟನೆಯಿಂದ ಬದಲಾವಣೆ ಆಗಲ್ಲ. ನಮ್ಮ ಹಾಗೂ ರಾಮುಲು ನಡುವಿನ ಸ್ನೇಹ ಸಾಮಾನ್ಯವಾದುದ್ದಲ್ಲ, ಹದಿನೈದು ಹದಿನಾರು ವಯಸ್ಸಿನವರಾಗಿದ್ದಾಗಿಂದ ಸ್ನೇಹ ಇದೆ. ನಲವತ್ತು ವರ್ಷದಿಂದ ಜೊತೆಗಿದ್ದೇವೆ. ಶೀಘ್ರದಲ್ಲಿ ರಾಮುಲು ನಾನು ಇಬ್ಬರು ಒಟ್ಟಿಗೆ ಜೂನಿಯರ್ ಸಿನಿಮಾ ನೋಡ್ತೇವೆ ಎಂದು ಹೇಳಿದರು.
ಸಹೋದರ ಸೋಮಶೇಖರ್ ರೆಡ್ಡಿ, ಪತ್ನಿ ಅರುಣಾ, ಮಗ ಕಿರಿಟಿ ಜೊತೆಗೆ ಸಿನಿಮಾ ನೋಡಿದ ಜನಾರ್ದನ ರೆಡ್ಡಿ ಸಿನಿಮಾ ಅದ್ಭುತವಾಗಿದೆ ಎಂದಿದ್ದಾರೆ. ಕಿರೀಟಿಗೆ ಚಿಕ್ಕವನಿದ್ದಾಗಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇತ್ತು. ಮನೆಯಲ್ಲಿ ಎಷ್ಟೇ ರಾಜಕೀಯ ಇದ್ರೂ, ಮಗ ಸಿನಿಮಾ ಬಿಟ್ಟರೆ ಯಾವುದರ ಬಗ್ಗೆಯೂ ಕಾನ್ಸಂಟ್ರೇಶನ್ ಮಾಡುತ್ತಿರಲಿಲ್ಲ. ಕಿರೀಟಿ ಪುನೀತ್ ರಾಜ್ಕುಮಾರ್ ಮತ್ತು ಎನ್ಟಿಆರ್ ಅವರನ್ನು ನೋಡಿಕೊಂಡು ಬೆಳೆದಿದ್ದಾನೆ. ಜೂನಿಯರ್ ಸಿನಿಮಾ ಯಶಸ್ವಿಯಾಗಲಿದೆ ಎಂದು ಈ ಸಂದರ್ಭದಲ್ಲಿ ಅವರು ಭರವಸೆ ವ್ಯಕ್ತಪಡಿಸಿದರು.
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…
ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…