ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಅಮೂಲ್ಯ ಲಿಯೋನಾ ಬಂಧನದ ಬಳಿಕ ಪಾಕಿಸ್ತಾನದ ಪರವಾಗಿರುವುದು ಆಕೆಯ ಮುಖ್ಯ ಉದ್ದೇಶ ಅಲ್ಲ ಎಂದು ಹೇಳಿದ್ದಾಳೆ. ಹಾಗೆಯೇ ಆಕೆಗೆ ಮಾತನ್ನು ಮುಗಿಸಲು ಅವಕಾಶ ನೀಡಿದ್ದಲ್ಲಿ ಈ ರೀತಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾಳೆ.
ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯ ಈ ಕುರಿತಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದು “ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಗಳನ್ನು ಪಾಕಿಸ್ತಾನಕ್ಕೆ ಹೋಗುವಂತೆ ಹೇಳುತ್ತಾರೆ. ಆದರೆ ಪ್ರತಿಭಟನೆಯಲ್ಲಿ ಎಲ್ಲಾ ಜನರು ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾರೆ. ಅಲ್ಲಿರುವವರು ಭಾರತದ ಪರವಾಗೇ ಮಾತನಾಡುತ್ತಾರೆ. ನಾನು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದಾಗ ಯಾರೂ ಕೂಡಾ ಅದಕ್ಕೆ ಜಿಂದಾಬಾದ್ ಎಂದು ಕೂಗಲಿಲ್ಲ. ಯಾವಾಗ ಪ್ರತಿಭಟನ ನಿರತರು ಅದಕ್ಕೆ ಪ್ರತಿಯಾಗಿ ಘೋಷಣೆ ಕೂಗಿಲಿಲ್ಲವೋ ಅದು ಅವರ ದೇಶ ಭಕ್ತಿಯನ್ನು ತೋರಿಸುತ್ತದೆ. ನಾನು ಆ ಬಳಿಕ ನಾವೆಲ್ಲರೂ ಭಾರತೀಯರು ಎಂದು ಹೇಳಿ ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಲು ನಿರ್ಧಾರ ಮಾಡಿದ್ದೆ. ಆದರೆ ನಾನು ಒಂದು ಬಾರಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದಾಗ ನನ್ನ ಕೈಯಿಂದ ಮೈಕ್ನ್ನು ಕಿತ್ತುಕೊಂಡರು. ನಾನು ನನ್ನ ಭಾಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ಕೋರಿಕೊಂಡೆ ಆದರೆ ಯಾರೂ ಕೂಡಾ ನನ್ನ ಮಾತನ್ನು ಕೇಳಲಿಲ್ಲ” ಎಂದು ಹೇಳಿದ್ದಾಳೆ.
ಪ್ರಸ್ತುತ ಅಮೂಲ್ಯ ಲಿಯೋನಾಳನ್ನು ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿದೆ. ಹಾಗೆಯೇ ಈ ಕಾರ್ಯಕ್ರಮ ಆಯೋಜಕರು ಹಾಗೂ ಅಲ್ಲಿ ಉಪಸ್ಥಿತರಿದ್ದವರನ್ನು ವಿಚಾರಣೆ ಮಾಡಲಾಗಿದೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…