ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಅಮೂಲ್ಯ ಲಿಯೋನಾ ಬಂಧನದ ಬಳಿಕ ಪಾಕಿಸ್ತಾನದ ಪರವಾಗಿರುವುದು ಆಕೆಯ ಮುಖ್ಯ ಉದ್ದೇಶ ಅಲ್ಲ ಎಂದು ಹೇಳಿದ್ದಾಳೆ. ಹಾಗೆಯೇ ಆಕೆಗೆ ಮಾತನ್ನು ಮುಗಿಸಲು ಅವಕಾಶ ನೀಡಿದ್ದಲ್ಲಿ ಈ ರೀತಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾಳೆ.
ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯ ಈ ಕುರಿತಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದು “ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಗಳನ್ನು ಪಾಕಿಸ್ತಾನಕ್ಕೆ ಹೋಗುವಂತೆ ಹೇಳುತ್ತಾರೆ. ಆದರೆ ಪ್ರತಿಭಟನೆಯಲ್ಲಿ ಎಲ್ಲಾ ಜನರು ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾರೆ. ಅಲ್ಲಿರುವವರು ಭಾರತದ ಪರವಾಗೇ ಮಾತನಾಡುತ್ತಾರೆ. ನಾನು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದಾಗ ಯಾರೂ ಕೂಡಾ ಅದಕ್ಕೆ ಜಿಂದಾಬಾದ್ ಎಂದು ಕೂಗಲಿಲ್ಲ. ಯಾವಾಗ ಪ್ರತಿಭಟನ ನಿರತರು ಅದಕ್ಕೆ ಪ್ರತಿಯಾಗಿ ಘೋಷಣೆ ಕೂಗಿಲಿಲ್ಲವೋ ಅದು ಅವರ ದೇಶ ಭಕ್ತಿಯನ್ನು ತೋರಿಸುತ್ತದೆ. ನಾನು ಆ ಬಳಿಕ ನಾವೆಲ್ಲರೂ ಭಾರತೀಯರು ಎಂದು ಹೇಳಿ ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಲು ನಿರ್ಧಾರ ಮಾಡಿದ್ದೆ. ಆದರೆ ನಾನು ಒಂದು ಬಾರಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದಾಗ ನನ್ನ ಕೈಯಿಂದ ಮೈಕ್ನ್ನು ಕಿತ್ತುಕೊಂಡರು. ನಾನು ನನ್ನ ಭಾಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ಕೋರಿಕೊಂಡೆ ಆದರೆ ಯಾರೂ ಕೂಡಾ ನನ್ನ ಮಾತನ್ನು ಕೇಳಲಿಲ್ಲ” ಎಂದು ಹೇಳಿದ್ದಾಳೆ.
ಪ್ರಸ್ತುತ ಅಮೂಲ್ಯ ಲಿಯೋನಾಳನ್ನು ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿದೆ. ಹಾಗೆಯೇ ಈ ಕಾರ್ಯಕ್ರಮ ಆಯೋಜಕರು ಹಾಗೂ ಅಲ್ಲಿ ಉಪಸ್ಥಿತರಿದ್ದವರನ್ನು ವಿಚಾರಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…