ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಅಮೂಲ್ಯ ಲಿಯೋನಾ ಬಂಧನದ ಬಳಿಕ ಪಾಕಿಸ್ತಾನದ ಪರವಾಗಿರುವುದು ಆಕೆಯ ಮುಖ್ಯ ಉದ್ದೇಶ ಅಲ್ಲ ಎಂದು ಹೇಳಿದ್ದಾಳೆ. ಹಾಗೆಯೇ ಆಕೆಗೆ ಮಾತನ್ನು ಮುಗಿಸಲು ಅವಕಾಶ ನೀಡಿದ್ದಲ್ಲಿ ಈ ರೀತಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾಳೆ.
ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯ ಈ ಕುರಿತಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದು “ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಗಳನ್ನು ಪಾಕಿಸ್ತಾನಕ್ಕೆ ಹೋಗುವಂತೆ ಹೇಳುತ್ತಾರೆ. ಆದರೆ ಪ್ರತಿಭಟನೆಯಲ್ಲಿ ಎಲ್ಲಾ ಜನರು ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾರೆ. ಅಲ್ಲಿರುವವರು ಭಾರತದ ಪರವಾಗೇ ಮಾತನಾಡುತ್ತಾರೆ. ನಾನು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದಾಗ ಯಾರೂ ಕೂಡಾ ಅದಕ್ಕೆ ಜಿಂದಾಬಾದ್ ಎಂದು ಕೂಗಲಿಲ್ಲ. ಯಾವಾಗ ಪ್ರತಿಭಟನ ನಿರತರು ಅದಕ್ಕೆ ಪ್ರತಿಯಾಗಿ ಘೋಷಣೆ ಕೂಗಿಲಿಲ್ಲವೋ ಅದು ಅವರ ದೇಶ ಭಕ್ತಿಯನ್ನು ತೋರಿಸುತ್ತದೆ. ನಾನು ಆ ಬಳಿಕ ನಾವೆಲ್ಲರೂ ಭಾರತೀಯರು ಎಂದು ಹೇಳಿ ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಲು ನಿರ್ಧಾರ ಮಾಡಿದ್ದೆ. ಆದರೆ ನಾನು ಒಂದು ಬಾರಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದಾಗ ನನ್ನ ಕೈಯಿಂದ ಮೈಕ್ನ್ನು ಕಿತ್ತುಕೊಂಡರು. ನಾನು ನನ್ನ ಭಾಷಣವನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ಕೋರಿಕೊಂಡೆ ಆದರೆ ಯಾರೂ ಕೂಡಾ ನನ್ನ ಮಾತನ್ನು ಕೇಳಲಿಲ್ಲ” ಎಂದು ಹೇಳಿದ್ದಾಳೆ.
ಪ್ರಸ್ತುತ ಅಮೂಲ್ಯ ಲಿಯೋನಾಳನ್ನು ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿದೆ. ಹಾಗೆಯೇ ಈ ಕಾರ್ಯಕ್ರಮ ಆಯೋಜಕರು ಹಾಗೂ ಅಲ್ಲಿ ಉಪಸ್ಥಿತರಿದ್ದವರನ್ನು ವಿಚಾರಣೆ ಮಾಡಲಾಗಿದೆ.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…