ಬೆಂಗಳೂರು: ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು ಎಂದು ರೇವತಿ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಇದೀಗ ಮೊದಲ ಬಾರಿಗೆ ರೇವತಿ ಮೇಲಿರುವ ಭಾವನೆಯನ್ನು ಹೇಳಿಕೊಂಡಿದ್ದಾರೆ.
“ನನ್ನ ರಾಜಕುಮಾರಿ, ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ. ಸಮಯ ಕಳೆದಂತೆ ಸೌಂದರ್ಯ ಮಾಸಬಹುದು. ಆದರೆ ಒಳ್ಳೆಯ ಗುಣ ಸದಾ ನಮ್ಮ ಜೊತೆಯಲ್ಲಿಯೇ ಉಳಿಯುತ್ತದೆ. ನಾನು ನಿಮ್ಮ ವ್ಯಕ್ತಿತ್ವವನ್ನು ಪ್ರೀತಿಸುತ್ತೇನೆ. ನಿಮ್ಮೊಂದಿಗೆ ನಾನು ಕಳೆಯುತ್ತಿರುವ ಪ್ರತಿ ಕ್ಷಣವೂ ಅಮೂಲ್ಯವಾದುದ್ದು. ನಾನು ಪ್ರತಿ ಸೆಕೆಂಡ್ ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಭಾವಿ ಪತ್ನಿ ಬಗ್ಗೆ ನಿಖಿಲ್ ಇನ್ಸ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
“ನಿಮ್ಮ ಜೊತೆ ಕೊನೆಯವರೆಗೂ ಇದೇ ರೀತಿ ಇರಲು ಇಷ್ಟಪಡುತ್ತೇನೆ. ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು” ಎಂದು ರೇವತಿ ಬಗ್ಗೆ ರೊಮ್ಯಾಂಟಿಕ್ ಮೂಡಿನಲ್ಲಿ ನಿಖಿಲ್ ಹೇಳಿದ್ದಾರೆ.
ಅಷ್ಟೇ ಅಲ್ಲದೆ ರೇವತಿ ಕೈಬರಹದಲ್ಲಿ ಬರೆದಿರುವ ಪತ್ರವನ್ನು ನಿಖಿಲ್ ಮತ್ತು ರೇವತಿ ಕೈ-ಕೈ ಹಿಡಿದುಕೊಂಡು ಓದುತ್ತಿರುವ ಫೋಟೋವನ್ನೂ ಇನ್ಸ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಇವರ ವಿವಾಹ ಕಾರ್ಯಕ್ರಮ ಏಪ್ರಿಲ್ 17 ರಾಮನಗರ-ಚನ್ನಪಟ್ಟಣ ನಡುವಿನ ಜನಪದ ಲೋಕದ ಬಳಿ ನಡೆಯಲಿದೆ. ಅದ್ಧೂರಿ ಸೆಟ್ನಲ್ಲಿ ಶಾಸ್ತ್ರೋಕ್ತ ಮತ್ತು ವಾಸ್ತು ಪ್ರಕಾರವಾಗಿ ಇವರ ಮದುವೆ ನಡೆಯಲಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…