ಬೆಂಗಳೂರು: ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು ಎಂದು ರೇವತಿ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಇದೀಗ ಮೊದಲ ಬಾರಿಗೆ ರೇವತಿ ಮೇಲಿರುವ ಭಾವನೆಯನ್ನು ಹೇಳಿಕೊಂಡಿದ್ದಾರೆ.
“ನನ್ನ ರಾಜಕುಮಾರಿ, ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ. ಸಮಯ ಕಳೆದಂತೆ ಸೌಂದರ್ಯ ಮಾಸಬಹುದು. ಆದರೆ ಒಳ್ಳೆಯ ಗುಣ ಸದಾ ನಮ್ಮ ಜೊತೆಯಲ್ಲಿಯೇ ಉಳಿಯುತ್ತದೆ. ನಾನು ನಿಮ್ಮ ವ್ಯಕ್ತಿತ್ವವನ್ನು ಪ್ರೀತಿಸುತ್ತೇನೆ. ನಿಮ್ಮೊಂದಿಗೆ ನಾನು ಕಳೆಯುತ್ತಿರುವ ಪ್ರತಿ ಕ್ಷಣವೂ ಅಮೂಲ್ಯವಾದುದ್ದು. ನಾನು ಪ್ರತಿ ಸೆಕೆಂಡ್ ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಭಾವಿ ಪತ್ನಿ ಬಗ್ಗೆ ನಿಖಿಲ್ ಇನ್ಸ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
“ನಿಮ್ಮ ಜೊತೆ ಕೊನೆಯವರೆಗೂ ಇದೇ ರೀತಿ ಇರಲು ಇಷ್ಟಪಡುತ್ತೇನೆ. ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು” ಎಂದು ರೇವತಿ ಬಗ್ಗೆ ರೊಮ್ಯಾಂಟಿಕ್ ಮೂಡಿನಲ್ಲಿ ನಿಖಿಲ್ ಹೇಳಿದ್ದಾರೆ.
ಅಷ್ಟೇ ಅಲ್ಲದೆ ರೇವತಿ ಕೈಬರಹದಲ್ಲಿ ಬರೆದಿರುವ ಪತ್ರವನ್ನು ನಿಖಿಲ್ ಮತ್ತು ರೇವತಿ ಕೈ-ಕೈ ಹಿಡಿದುಕೊಂಡು ಓದುತ್ತಿರುವ ಫೋಟೋವನ್ನೂ ಇನ್ಸ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಇವರ ವಿವಾಹ ಕಾರ್ಯಕ್ರಮ ಏಪ್ರಿಲ್ 17 ರಾಮನಗರ-ಚನ್ನಪಟ್ಟಣ ನಡುವಿನ ಜನಪದ ಲೋಕದ ಬಳಿ ನಡೆಯಲಿದೆ. ಅದ್ಧೂರಿ ಸೆಟ್ನಲ್ಲಿ ಶಾಸ್ತ್ರೋಕ್ತ ಮತ್ತು ವಾಸ್ತು ಪ್ರಕಾರವಾಗಿ ಇವರ ಮದುವೆ ನಡೆಯಲಿದೆ.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…