Featured

ನನ್ನ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ, ಅದಕ್ಕಾಗಿ ದೇವರ ಮೊರೆ ಹೋಗುತ್ತೇನೆ: ಸಿಎಂ ಕುಮಾರಸ್ವಾಮಿ

ಧರ್ಮಸ್ಥಳ: ನನ್ನ ಮೇಲೆ ಹಲವರ ಕೆಟ್ಟ ದೃಷ್ಟಿ ಬಿದ್ದಿದೆ, ಹೀಗಾಗಿ ದೇವರ ಮೊರೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮೇಲೆ ಹಲವರ ಕೆಟ್ಟ ದೃಷ್ಟಿ ಬಿದ್ದಿರುವುದರಿಂದ ದೇವರ ಮೊರೆ ಹೋಗಬೇಕಾಗಿದೆ, ನಿನ್ನೆ ತಮ್ಮ ಕುಟುಂಬ ಸದಸ್ಯರೊಂದಿಗೆ ಧರ್ಮಸ್ಥಳಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಶ್ರಾವಣ ಮಾಸದ ಆರಂಭಕ್ಕೆ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳ ದೇಗುಲಕ್ಕೆ ಬಂದಿರುವುದಾಗಿ ತಿಳಿಸಿದರು. ಇಂದು ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಒಣದ್ರಾಕ್ಷಿಯಿಂದ ತುಲಾಭಾರ ಸೇವೆ ಸಲ್ಲಿಸಿ ಆಶ್ಲೇಷ ಬಲಿ ಮುಗಿಸಿ ನೈವೇದ್ಯ ಸ್ವೀಕರಿಸಲಿದ್ದಾರೆ. ನಂತರ ಮಧ್ಯಾಹ್ನ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಶ್ರಾವಣ ಮಾಸದ ಆರಂಭದ ಸೋಮವಾರವಾದ ನಿನ್ನೆ  ದಿನವಿಡೀ ಮುಖ್ಯಮಂತ್ರಿ ಕುಮಾರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವುದು ಮತ್ತು ವಿಶೇಷ ಪೂಜೆ ಸಲ್ಲಿಸುವುದರಲ್ಲಿ ನಿರತರಾಗಿದ್ದರು.

ನಿನ್ನೆ ನಸುಕಿನ ಜಾವ ಸೂರ್ಯ ಉದಯಿಸುತ್ತಿದ್ದಂತೆ ತಮ್ಮ ಹುಟ್ಟೂರು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಈಶ್ವರ ದೇವಾಲಯಕ್ಕೆ ಭೇಟಿ ನೀಡಿದರು. ಶ್ರಾವಣ ಮಾಸದ ಮೊದಲ ಸೋಮವಾರ ಈ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಹಲವು ವರ್ಷಗಳಿಂದ ದೇವೇಗೌಡ ಕುಟುಂಬ ಮಾಡಿಕೊಂಡು ಬರುತ್ತಿದೆ.

ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚನ್ನಮ್ಮ ದೇವೇಗೌಡ, ಅನಿತಾ ಕುಮಾರಸ್ವಾಮಿ ಮತ್ತು ಹೆಚ್ ಡಿ ರೇವಣ್ಣ ಪೂಜಾ ವಿಧಿವಿಧಾನಗಳಲ್ಲಿ ಭಾಗಿಯಾದರು. ಈಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಮತ್ತು ಸಂಕಲ್ಪ ಮಾಡಿಸಿದರು. ರೇವಣ್ಣ ಅವರ ಪತ್ನಿ ಭವಾನಿ ಮತ್ತು ಪುತ್ರ ಭಾಗಿಯಾಗಿರಲಿಲ್ಲ. ಶೃಂಗೇರಿಯ ಐವರು ಅರ್ಚಕರು ದೇವೇಗೌಡರ ಕುಟುಂಬದವರ ಹೆಸರಿನಲ್ಲಿ ಪೂಜೆ ಸಲ್ಲಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿ ಫಾರ್ಮ್ ನೀಡುವ ಅಭ್ಯರ್ಥಿಗಳ ಹೆಸರಿನಲ್ಲಿ ಪೂಜೆ ಮಾಡಿಸಿದ್ದು ವಿಶೇಷವಾಗಿತ್ತು. ಶ್ರಾವಣ ಸೋಮವಾರದಲ್ಲಿ ಪೂಜೆ ಸಲ್ಲಿಸಿದರೆ ನಾವು ಅಂದುಕೊಂಡ ಕಾರ್ಯಗಳು ನೆರವೇರುತ್ತವೆ ಎಂಬುದು ನಂಬಿಕೆಯಾಗಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

13 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

14 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

14 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

17 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

17 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

18 hours ago