ಧರ್ಮಸ್ಥಳ: ನನ್ನ ಮೇಲೆ ಹಲವರ ಕೆಟ್ಟ ದೃಷ್ಟಿ ಬಿದ್ದಿದೆ, ಹೀಗಾಗಿ ದೇವರ ಮೊರೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮೇಲೆ ಹಲವರ ಕೆಟ್ಟ ದೃಷ್ಟಿ ಬಿದ್ದಿರುವುದರಿಂದ ದೇವರ ಮೊರೆ ಹೋಗಬೇಕಾಗಿದೆ, ನಿನ್ನೆ ತಮ್ಮ ಕುಟುಂಬ ಸದಸ್ಯರೊಂದಿಗೆ ಧರ್ಮಸ್ಥಳಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಶ್ರಾವಣ ಮಾಸದ ಆರಂಭಕ್ಕೆ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳ ದೇಗುಲಕ್ಕೆ ಬಂದಿರುವುದಾಗಿ ತಿಳಿಸಿದರು. ಇಂದು ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಒಣದ್ರಾಕ್ಷಿಯಿಂದ ತುಲಾಭಾರ ಸೇವೆ ಸಲ್ಲಿಸಿ ಆಶ್ಲೇಷ ಬಲಿ ಮುಗಿಸಿ ನೈವೇದ್ಯ ಸ್ವೀಕರಿಸಲಿದ್ದಾರೆ. ನಂತರ ಮಧ್ಯಾಹ್ನ ಬೆಂಗಳೂರಿಗೆ ವಾಪಸಾಗಲಿದ್ದಾರೆ.
ಶ್ರಾವಣ ಮಾಸದ ಆರಂಭದ ಸೋಮವಾರವಾದ ನಿನ್ನೆ ದಿನವಿಡೀ ಮುಖ್ಯಮಂತ್ರಿ ಕುಮಾರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವುದು ಮತ್ತು ವಿಶೇಷ ಪೂಜೆ ಸಲ್ಲಿಸುವುದರಲ್ಲಿ ನಿರತರಾಗಿದ್ದರು.
ನಿನ್ನೆ ನಸುಕಿನ ಜಾವ ಸೂರ್ಯ ಉದಯಿಸುತ್ತಿದ್ದಂತೆ ತಮ್ಮ ಹುಟ್ಟೂರು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಈಶ್ವರ ದೇವಾಲಯಕ್ಕೆ ಭೇಟಿ ನೀಡಿದರು. ಶ್ರಾವಣ ಮಾಸದ ಮೊದಲ ಸೋಮವಾರ ಈ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಹಲವು ವರ್ಷಗಳಿಂದ ದೇವೇಗೌಡ ಕುಟುಂಬ ಮಾಡಿಕೊಂಡು ಬರುತ್ತಿದೆ.
ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚನ್ನಮ್ಮ ದೇವೇಗೌಡ, ಅನಿತಾ ಕುಮಾರಸ್ವಾಮಿ ಮತ್ತು ಹೆಚ್ ಡಿ ರೇವಣ್ಣ ಪೂಜಾ ವಿಧಿವಿಧಾನಗಳಲ್ಲಿ ಭಾಗಿಯಾದರು. ಈಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಮತ್ತು ಸಂಕಲ್ಪ ಮಾಡಿಸಿದರು. ರೇವಣ್ಣ ಅವರ ಪತ್ನಿ ಭವಾನಿ ಮತ್ತು ಪುತ್ರ ಭಾಗಿಯಾಗಿರಲಿಲ್ಲ. ಶೃಂಗೇರಿಯ ಐವರು ಅರ್ಚಕರು ದೇವೇಗೌಡರ ಕುಟುಂಬದವರ ಹೆಸರಿನಲ್ಲಿ ಪೂಜೆ ಸಲ್ಲಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿ ಫಾರ್ಮ್ ನೀಡುವ ಅಭ್ಯರ್ಥಿಗಳ ಹೆಸರಿನಲ್ಲಿ ಪೂಜೆ ಮಾಡಿಸಿದ್ದು ವಿಶೇಷವಾಗಿತ್ತು. ಶ್ರಾವಣ ಸೋಮವಾರದಲ್ಲಿ ಪೂಜೆ ಸಲ್ಲಿಸಿದರೆ ನಾವು ಅಂದುಕೊಂಡ ಕಾರ್ಯಗಳು ನೆರವೇರುತ್ತವೆ ಎಂಬುದು ನಂಬಿಕೆಯಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…