Featured

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವುದು ಜನರೇ ಹೊರತು, ಬೇರೆ ಯಾರೂ ಅಲ್ಲ : ಡಿ.ಕೆ. ಶಿ – vishwanews24

ಜನರೇ ನನ್ನ ಹಿಂದಿರುವ ಶಕ್ತಿ, ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋದು ಅವರಿಗೆ ಬಿಟ್ಟಿದ್ದು:  ಡಿ.ಕೆ. ಶಿ

ಬೆಂಗಳೂರು: ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವುದು ಜನರೇ ಹೊರತು, ಬೇರೆ ಯಾರೂ ಅಲ್ಲ. ಅವರೇ ನನ್ನ ಹಿಂದಿರುವ ಶಕ್ತಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ.

ವಿಧಾನಸೌಧದ ಆವರಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ, ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂಬ ಸಿ.ಪಿ ಯೋಗೇಶ್ವರ್ (C.P Yogeshwar) ಹೇಳಿಕೆಗೆ ಅವರು ತಿರುಗೇಟು ಕೊಟ್ಟಿದ್ದಾರೆ. ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ದೊಡ್ಡವರು, ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ ಎಂದು ಅವರು ಹೇಳಿದ್ದಾರೆ.

ನಾನೂ ಸಹ ರಾಮನಗರ ಜಿಲ್ಲೆಯವನು. ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ವಪ್ರತಿಷ್ಠೆಗಾಗಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂಬ ಸುರೇಶ್ ಕುಮಾರ್ ಅವರ ಹೇಳಿಕೆ ವಿಚಾರವಾಗಿ, ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆದರೆ ಕನಕಪುರದಲ್ಲಿ ಯಾಕೆ ಉಪಚುನಾವಣೆ ನಡೆಯುತ್ತದೆ? ನಾನು ಕನಕಪುರದ ಶಾಸಕ. ಪಕ್ಷದ ಅಧ್ಯಕ್ಷನಾಗಿ ನನ್ನ ಮೇಲೆ ಜವಾಬ್ದಾರಿ ಇದೆ. ಇದೂ ನನ್ನದೇ ಕ್ಷೇತ್ರ, ನನ್ನದೇ ನಾಯಕತ್ವ. ಸಿದ್ದರಾಮಯ್ಯ ಹಾಗೂ ನಾನು ಸೇರಿ ಚುನಾವಣೆ ನಡೆಸುತ್ತೇವೆ ಎಂದಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

12 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

13 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

15 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

15 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

16 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

16 hours ago