Featured

ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವುದು ಜನರೇ ಹೊರತು, ಬೇರೆ ಯಾರೂ ಅಲ್ಲ : ಡಿ.ಕೆ. ಶಿ – vishwanews24

ಜನರೇ ನನ್ನ ಹಿಂದಿರುವ ಶಕ್ತಿ, ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋದು ಅವರಿಗೆ ಬಿಟ್ಟಿದ್ದು:  ಡಿ.ಕೆ. ಶಿ

ಬೆಂಗಳೂರು: ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡುವುದು ಜನರೇ ಹೊರತು, ಬೇರೆ ಯಾರೂ ಅಲ್ಲ. ಅವರೇ ನನ್ನ ಹಿಂದಿರುವ ಶಕ್ತಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ.

ವಿಧಾನಸೌಧದ ಆವರಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ, ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ ಎಂಬ ಸಿ.ಪಿ ಯೋಗೇಶ್ವರ್ (C.P Yogeshwar) ಹೇಳಿಕೆಗೆ ಅವರು ತಿರುಗೇಟು ಕೊಟ್ಟಿದ್ದಾರೆ. ನಮ್ಮ ರಾಜಕೀಯ ಅಂತ್ಯ ತೀರ್ಮಾನ ಮಾಡುವವರು ಜನರು. ಯೋಗೇಶ್ವರ್ ದೊಡ್ಡವರು, ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ ಎಂದು ಅವರು ಹೇಳಿದ್ದಾರೆ.

ನಾನೂ ಸಹ ರಾಮನಗರ ಜಿಲ್ಲೆಯವನು. ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ವಪ್ರತಿಷ್ಠೆಗಾಗಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ ಎಂಬ ಸುರೇಶ್ ಕುಮಾರ್ ಅವರ ಹೇಳಿಕೆ ವಿಚಾರವಾಗಿ, ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆದರೆ ಕನಕಪುರದಲ್ಲಿ ಯಾಕೆ ಉಪಚುನಾವಣೆ ನಡೆಯುತ್ತದೆ? ನಾನು ಕನಕಪುರದ ಶಾಸಕ. ಪಕ್ಷದ ಅಧ್ಯಕ್ಷನಾಗಿ ನನ್ನ ಮೇಲೆ ಜವಾಬ್ದಾರಿ ಇದೆ. ಇದೂ ನನ್ನದೇ ಕ್ಷೇತ್ರ, ನನ್ನದೇ ನಾಯಕತ್ವ. ಸಿದ್ದರಾಮಯ್ಯ ಹಾಗೂ ನಾನು ಸೇರಿ ಚುನಾವಣೆ ನಡೆಸುತ್ತೇವೆ ಎಂದಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago