ನನ್ನ ರಾಜಕೀಯ ಜೀವನಕ್ಕಾಗಿ ನನ್ನನ್ನು ನಾನು ಮಾರಿಕೊಂಡಿಲ್ಲ : ಎಚ್‌.ವಿಶ್ವನಾಥ್‌ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಮೈಸೂರು,: “ನನ್ನ ರಾಜಕೀಯ ಜೀವನಕ್ಕಾಗಿ ನನ್ನನ್ನು ನಾನು ಮಾರಿಕೊಂಡಿಲ್ಲ” ಎಂದು ಶಾಸಕ ಅಡಗೂರು ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ತಮ್ಮ ಇತ್ತೀಚಿನ ದಿನದ ರಾಜಕೀಯ ಬದಲಾವಣೆ ಕುರಿತು ಮತದಾರರಿಗೆ ಪತ್ರ ಬರೆದಿರುವ ವಿಶ್ವನಾಥ್, “ನನ್ನ ರಾಜಕೀಯ ವಿರೋಧಿಗಳು ಪ್ರಚಾರ ಮಾಡುತ್ತಿರುವಂತೆ ನನ್ನನ್ನು ನಾನು ಮಾರಿಕೊಂಡಿಲ್ಲ. ಹುಣಸೂರು ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ನೀಡಿದ ಮತಗಳಿಗೂ ಅಪಚಾರ ಮಾಡಿಲ್ಲ” ಎಂದಿದ್ದಾರೆ.

“ಹುಣಸೂರು ವಿಧಾನಸಭಾ ಕ್ಷೇತ್ರದ ನನ್ನ ಮತದಾರ ಬಂಧುಗಳೇ, ಇತ್ತೀಚೆಗಿನ ರಾಜ್ಯ ರಾಜಕೀಯ ವಿದ್ಯಮಾನಗಳು ತಮಗೆ ತಿಳಿದೇ ಇದೆ. ಇವುಗಳಿಗೆ ಸಕಾರಣಗಳನ್ನು ನಿಮಗೆ ತಿಳಿಸಲು ನಾನು ಜವಾಬ್ದಾರನಾಗಿದ್ದೇನೆ.

ನಿಮ್ಮ ಪ್ರತಿ ಮತಕ್ಕಾಗಿ ನಿಮಗೆ ಸದಾ ಋಣಿಯಾಗಿದ್ದೇನೆ, ತಲೆ ಬಾಗಿದ್ದೇನೆ. ನಿಮ್ಮ ಮತ ಬಲದಿಂದ ಶಾಸಕನಾದ ನನ್ನನ್ನು ಈ ವ್ಯವಸ್ಥೆ ಶೋಷಿಸಿತು, ಅಪಮಾನಿಸಿತು, ಕಡೆಗಣಿಸಿತು. ಅನುಭವ, ಪ್ರಾಮಾಣಿಕತೆ ಮತ್ತು ಹಿರಿತನಕ್ಕೆ ಬೆಲೆಯಿಲ್ಲದಂತಾಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.