ಮೈಸೂರು,: “ನನ್ನ ರಾಜಕೀಯ ಜೀವನಕ್ಕಾಗಿ ನನ್ನನ್ನು ನಾನು ಮಾರಿಕೊಂಡಿಲ್ಲ” ಎಂದು ಶಾಸಕ ಅಡಗೂರು ಎಚ್.ವಿಶ್ವನಾಥ್ ಹೇಳಿದ್ದಾರೆ.
ತಮ್ಮ ಇತ್ತೀಚಿನ ದಿನದ ರಾಜಕೀಯ ಬದಲಾವಣೆ ಕುರಿತು ಮತದಾರರಿಗೆ ಪತ್ರ ಬರೆದಿರುವ ವಿಶ್ವನಾಥ್, “ನನ್ನ ರಾಜಕೀಯ ವಿರೋಧಿಗಳು ಪ್ರಚಾರ ಮಾಡುತ್ತಿರುವಂತೆ ನನ್ನನ್ನು ನಾನು ಮಾರಿಕೊಂಡಿಲ್ಲ. ಹುಣಸೂರು ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ನೀಡಿದ ಮತಗಳಿಗೂ ಅಪಚಾರ ಮಾಡಿಲ್ಲ” ಎಂದಿದ್ದಾರೆ.
“ಹುಣಸೂರು ವಿಧಾನಸಭಾ ಕ್ಷೇತ್ರದ ನನ್ನ ಮತದಾರ ಬಂಧುಗಳೇ, ಇತ್ತೀಚೆಗಿನ ರಾಜ್ಯ ರಾಜಕೀಯ ವಿದ್ಯಮಾನಗಳು ತಮಗೆ ತಿಳಿದೇ ಇದೆ. ಇವುಗಳಿಗೆ ಸಕಾರಣಗಳನ್ನು ನಿಮಗೆ ತಿಳಿಸಲು ನಾನು ಜವಾಬ್ದಾರನಾಗಿದ್ದೇನೆ.
ನಿಮ್ಮ ಪ್ರತಿ ಮತಕ್ಕಾಗಿ ನಿಮಗೆ ಸದಾ ಋಣಿಯಾಗಿದ್ದೇನೆ, ತಲೆ ಬಾಗಿದ್ದೇನೆ. ನಿಮ್ಮ ಮತ ಬಲದಿಂದ ಶಾಸಕನಾದ ನನ್ನನ್ನು ಈ ವ್ಯವಸ್ಥೆ ಶೋಷಿಸಿತು, ಅಪಮಾನಿಸಿತು, ಕಡೆಗಣಿಸಿತು. ಅನುಭವ, ಪ್ರಾಮಾಣಿಕತೆ ಮತ್ತು ಹಿರಿತನಕ್ಕೆ ಬೆಲೆಯಿಲ್ಲದಂತಾಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…