ಮೈಸೂರು,: “ನನ್ನ ರಾಜಕೀಯ ಜೀವನಕ್ಕಾಗಿ ನನ್ನನ್ನು ನಾನು ಮಾರಿಕೊಂಡಿಲ್ಲ” ಎಂದು ಶಾಸಕ ಅಡಗೂರು ಎಚ್.ವಿಶ್ವನಾಥ್ ಹೇಳಿದ್ದಾರೆ.
ತಮ್ಮ ಇತ್ತೀಚಿನ ದಿನದ ರಾಜಕೀಯ ಬದಲಾವಣೆ ಕುರಿತು ಮತದಾರರಿಗೆ ಪತ್ರ ಬರೆದಿರುವ ವಿಶ್ವನಾಥ್, “ನನ್ನ ರಾಜಕೀಯ ವಿರೋಧಿಗಳು ಪ್ರಚಾರ ಮಾಡುತ್ತಿರುವಂತೆ ನನ್ನನ್ನು ನಾನು ಮಾರಿಕೊಂಡಿಲ್ಲ. ಹುಣಸೂರು ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ನೀಡಿದ ಮತಗಳಿಗೂ ಅಪಚಾರ ಮಾಡಿಲ್ಲ” ಎಂದಿದ್ದಾರೆ.
“ಹುಣಸೂರು ವಿಧಾನಸಭಾ ಕ್ಷೇತ್ರದ ನನ್ನ ಮತದಾರ ಬಂಧುಗಳೇ, ಇತ್ತೀಚೆಗಿನ ರಾಜ್ಯ ರಾಜಕೀಯ ವಿದ್ಯಮಾನಗಳು ತಮಗೆ ತಿಳಿದೇ ಇದೆ. ಇವುಗಳಿಗೆ ಸಕಾರಣಗಳನ್ನು ನಿಮಗೆ ತಿಳಿಸಲು ನಾನು ಜವಾಬ್ದಾರನಾಗಿದ್ದೇನೆ.
ನಿಮ್ಮ ಪ್ರತಿ ಮತಕ್ಕಾಗಿ ನಿಮಗೆ ಸದಾ ಋಣಿಯಾಗಿದ್ದೇನೆ, ತಲೆ ಬಾಗಿದ್ದೇನೆ. ನಿಮ್ಮ ಮತ ಬಲದಿಂದ ಶಾಸಕನಾದ ನನ್ನನ್ನು ಈ ವ್ಯವಸ್ಥೆ ಶೋಷಿಸಿತು, ಅಪಮಾನಿಸಿತು, ಕಡೆಗಣಿಸಿತು. ಅನುಭವ, ಪ್ರಾಮಾಣಿಕತೆ ಮತ್ತು ಹಿರಿತನಕ್ಕೆ ಬೆಲೆಯಿಲ್ಲದಂತಾಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…