ಮೈಸೂರು,: “ನನ್ನ ರಾಜಕೀಯ ಜೀವನಕ್ಕಾಗಿ ನನ್ನನ್ನು ನಾನು ಮಾರಿಕೊಂಡಿಲ್ಲ” ಎಂದು ಶಾಸಕ ಅಡಗೂರು ಎಚ್.ವಿಶ್ವನಾಥ್ ಹೇಳಿದ್ದಾರೆ.
ತಮ್ಮ ಇತ್ತೀಚಿನ ದಿನದ ರಾಜಕೀಯ ಬದಲಾವಣೆ ಕುರಿತು ಮತದಾರರಿಗೆ ಪತ್ರ ಬರೆದಿರುವ ವಿಶ್ವನಾಥ್, “ನನ್ನ ರಾಜಕೀಯ ವಿರೋಧಿಗಳು ಪ್ರಚಾರ ಮಾಡುತ್ತಿರುವಂತೆ ನನ್ನನ್ನು ನಾನು ಮಾರಿಕೊಂಡಿಲ್ಲ. ಹುಣಸೂರು ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ನೀಡಿದ ಮತಗಳಿಗೂ ಅಪಚಾರ ಮಾಡಿಲ್ಲ” ಎಂದಿದ್ದಾರೆ.
“ಹುಣಸೂರು ವಿಧಾನಸಭಾ ಕ್ಷೇತ್ರದ ನನ್ನ ಮತದಾರ ಬಂಧುಗಳೇ, ಇತ್ತೀಚೆಗಿನ ರಾಜ್ಯ ರಾಜಕೀಯ ವಿದ್ಯಮಾನಗಳು ತಮಗೆ ತಿಳಿದೇ ಇದೆ. ಇವುಗಳಿಗೆ ಸಕಾರಣಗಳನ್ನು ನಿಮಗೆ ತಿಳಿಸಲು ನಾನು ಜವಾಬ್ದಾರನಾಗಿದ್ದೇನೆ.
ನಿಮ್ಮ ಪ್ರತಿ ಮತಕ್ಕಾಗಿ ನಿಮಗೆ ಸದಾ ಋಣಿಯಾಗಿದ್ದೇನೆ, ತಲೆ ಬಾಗಿದ್ದೇನೆ. ನಿಮ್ಮ ಮತ ಬಲದಿಂದ ಶಾಸಕನಾದ ನನ್ನನ್ನು ಈ ವ್ಯವಸ್ಥೆ ಶೋಷಿಸಿತು, ಅಪಮಾನಿಸಿತು, ಕಡೆಗಣಿಸಿತು. ಅನುಭವ, ಪ್ರಾಮಾಣಿಕತೆ ಮತ್ತು ಹಿರಿತನಕ್ಕೆ ಬೆಲೆಯಿಲ್ಲದಂತಾಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…