ಮೈಸೂರು,: “ನನ್ನ ರಾಜಕೀಯ ಜೀವನಕ್ಕಾಗಿ ನನ್ನನ್ನು ನಾನು ಮಾರಿಕೊಂಡಿಲ್ಲ” ಎಂದು ಶಾಸಕ ಅಡಗೂರು ಎಚ್.ವಿಶ್ವನಾಥ್ ಹೇಳಿದ್ದಾರೆ.
ತಮ್ಮ ಇತ್ತೀಚಿನ ದಿನದ ರಾಜಕೀಯ ಬದಲಾವಣೆ ಕುರಿತು ಮತದಾರರಿಗೆ ಪತ್ರ ಬರೆದಿರುವ ವಿಶ್ವನಾಥ್, “ನನ್ನ ರಾಜಕೀಯ ವಿರೋಧಿಗಳು ಪ್ರಚಾರ ಮಾಡುತ್ತಿರುವಂತೆ ನನ್ನನ್ನು ನಾನು ಮಾರಿಕೊಂಡಿಲ್ಲ. ಹುಣಸೂರು ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ನೀಡಿದ ಮತಗಳಿಗೂ ಅಪಚಾರ ಮಾಡಿಲ್ಲ” ಎಂದಿದ್ದಾರೆ.
“ಹುಣಸೂರು ವಿಧಾನಸಭಾ ಕ್ಷೇತ್ರದ ನನ್ನ ಮತದಾರ ಬಂಧುಗಳೇ, ಇತ್ತೀಚೆಗಿನ ರಾಜ್ಯ ರಾಜಕೀಯ ವಿದ್ಯಮಾನಗಳು ತಮಗೆ ತಿಳಿದೇ ಇದೆ. ಇವುಗಳಿಗೆ ಸಕಾರಣಗಳನ್ನು ನಿಮಗೆ ತಿಳಿಸಲು ನಾನು ಜವಾಬ್ದಾರನಾಗಿದ್ದೇನೆ.
ನಿಮ್ಮ ಪ್ರತಿ ಮತಕ್ಕಾಗಿ ನಿಮಗೆ ಸದಾ ಋಣಿಯಾಗಿದ್ದೇನೆ, ತಲೆ ಬಾಗಿದ್ದೇನೆ. ನಿಮ್ಮ ಮತ ಬಲದಿಂದ ಶಾಸಕನಾದ ನನ್ನನ್ನು ಈ ವ್ಯವಸ್ಥೆ ಶೋಷಿಸಿತು, ಅಪಮಾನಿಸಿತು, ಕಡೆಗಣಿಸಿತು. ಅನುಭವ, ಪ್ರಾಮಾಣಿಕತೆ ಮತ್ತು ಹಿರಿತನಕ್ಕೆ ಬೆಲೆಯಿಲ್ಲದಂತಾಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…