ಕೋಲ್ಕತ್ತಾ,:ನನ್ನ ರಾಜಕೀಯ ಜೀವನದಲ್ಲಿ ಕಂಡ ಅತ್ಯಂತ ಅಪಾಯಕಾರಿ ಪ್ರಧಾನಿ ನರೇಂದ್ರ ಮೋದಿ ಅವರು. ನಾನು ರಾಜೀವ್ ಗಾಂಧಿ, ಪಿ.ವಿ. ನರಸಿಂಹ ರಾವ್, ಮನಮೋಹನ್ ಸಿಂಗ್ ಅವರನ್ನು ನೋಡಿದ್ದೇನೆ. ಆದರೆ, ಇಂಥ ‘ಭದ್ರಲೋಕ್’ ಪ್ರಧಾನಿಯನ್ನು ನಾನೆಂದೂ ಕಂಡಿದ್ದಿಲ್ಲ” ಎಂದು ಮಮತಾ ಪ್ರಧಾನಿ ಮೋದಿಯವರ ವಿರುದ್ಧ ಕಿಡಿಕಾರಿದ್ದಾರೆ.
ಪೂರ್ವ ಮಿಡ್ನಾಪೂರ್ ಕ್ಷೇತ್ರದ ನಿಂಟೋರಿಯಲ್ಲಿ ನಡೆದ ಚುನಾವಣಾ ಸಭೆಯನ್ನುದ್ದೇಶಿಸಿ ಈ ಕುರಿತು ಅವರು ಮಾತನಾಡಿದ್ದಾರೆ. ಯಾವತ್ತು ಬೇಕಾದರೂ ನನ್ನ ಕೊಲೆ ಮಾಡಬಹುದು. ಕೊಲೆ ನಂತರ ಅದು ಅಪಘಾತವೆಂದು ಹೇಳಿಕೊಳ್ಳಬಹುದು. ಇದರಿಂದ ನನಗೆ ಯಾವ ಭಯವೂ ಇಲ್ಲ. ಒಂದು ವೇಳೆ ನನ್ನ ಹತ್ಯೆಯಾದರೆ ನನ್ನ ತಾಯಿ, ತಾಯ್ನೆಲ ಮತ್ತು ನಾಡಿನ ಜನರು ತಿರುಗಿಬೀಳುತ್ತಾರೆ ಎಂದೂ ಎಚ್ಚರಿಕೆ ನೀಡಿದ್ದಾರೆ.
ಮಮತಾ ಅವರು ಮೋದಿ ಅವರನ್ನು ಭದ್ರಲೋಕ್ ಎಂದು ವ್ಯಂಗ್ಯವಾಗಿ ಕುಟುಕಿದ್ದಾರೆ. ಇನ್ನೂ ಮುಂದುವರಿದ ಅವರು ಎನ್ಆರ್ಸಿ ಯೋಜನೆ ಹೆಸರಲ್ಲಿ ತಮ್ಮನ್ನೆಲ್ಲಾ ಹೊರಗೆ ಹಾಕಲು ಬಿಜೆಪಿಯವರು ಚಿತಾವಣಿ ನಡೆಸುತ್ತಿದ್ದು ಆ ಪಕ್ಷಕ್ಕೆ ತಾವ್ಯಾರೂ ಮತ ಹಾಕಬೇಡಿ ಎಂದು ಕರೆ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…