ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಅದರಲ್ಲೂ ಮುಖ್ಯವಾಗಿ ಹಾಸನ ವಿಡಿಯೋ ಪೆನ್ಡ್ರೈವ್ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.
ಇದರ ಬೆನ್ನಲ್ಲೇ ಇದೀಗ ಡಿಕ ಶಿವಕುಮಾರ್ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನನಗೂ, ಪೆನ್ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ ಸ್ಪಷ್ಟನೆ ನೀಡಿದ್ದಾರೆ.
ನನಗೂ, ಪೆನ್ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ. ಹೀಗಾಗಿ ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಲಾಗಿದೆ, ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ. ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ದೇವರಾಜೇಗೌಡ ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್, ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಡ್ಯಾಮೇಜ್ ಕಂಟ್ರೋಲ್ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು. ದೇವರಾಜೇಗೌಡ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.
ಇದೇ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿ ಪೆನ್ ಡ್ರೈವ್ ಇದೆ ಅಂದಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಹೀಗಿರುವಾಗ ನನಗೂ, ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ. ಸದ್ಯ ನಾನು ಬೆಂಗಳೂರಿನಿಂದ ಹೊರಗಿದ್ದು, ಬಂದ ನಂತರ ಈ ಬಗ್ಗೆ ಮಾತಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…