ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಅದರಲ್ಲೂ ಮುಖ್ಯವಾಗಿ ಹಾಸನ ವಿಡಿಯೋ ಪೆನ್ಡ್ರೈವ್ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.
ಇದರ ಬೆನ್ನಲ್ಲೇ ಇದೀಗ ಡಿಕ ಶಿವಕುಮಾರ್ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನನಗೂ, ಪೆನ್ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ ಸ್ಪಷ್ಟನೆ ನೀಡಿದ್ದಾರೆ.
ನನಗೂ, ಪೆನ್ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ. ಹೀಗಾಗಿ ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಲಾಗಿದೆ, ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ. ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ದೇವರಾಜೇಗೌಡ ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್, ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಡ್ಯಾಮೇಜ್ ಕಂಟ್ರೋಲ್ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು. ದೇವರಾಜೇಗೌಡ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.
ಇದೇ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿ ಪೆನ್ ಡ್ರೈವ್ ಇದೆ ಅಂದಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಹೀಗಿರುವಾಗ ನನಗೂ, ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ. ಸದ್ಯ ನಾನು ಬೆಂಗಳೂರಿನಿಂದ ಹೊರಗಿದ್ದು, ಬಂದ ನಂತರ ಈ ಬಗ್ಗೆ ಮಾತಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…