ಬೆಂಗಳೂರು: ಉತ್ತರ ಪ್ರದೇಶದ ಪುಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳುವ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ “ಇದು ನನ್ನ ವೈಯಕ್ತಿಕ ನಂಬಿಕೆ ಭಕ್ತಿಯನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ಬುಧವಾರ ಹೇಳಿದ್ದಾರ.
ಮಲ್ಲಿಕಾರ್ಜುನ ಖರ್ಗೆ ಅವರ ಇತ್ತೀಚಿನ ಹೇಳಿಕೆಗೆ ಸಂಬಂಧಿಸಿ ಕುಂಭಮೇಳಕ್ಕೆ ಭೇಟಿ ನೀಡುವ ಕುರಿತು ಟೀಕೆಗಳ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್ “ಯಾರು ಬೇಕಾದರೂ ಏನು ಬೇಕಾದರೂ ಹೇಳಲಿ, ನಮ್ಮ ಧರ್ಮ ಮತ್ತು ಕರ್ಮ, ನಮ್ಮ ಆಚರಣೆಗಳು, ಸಂಪ್ರದಾಯಗಳು ಮತ್ತು ನಂಬಿಕೆಗಳ ವಿಷಯವಾಗಿದೆ” ಎಂದರು.
ಗಂಗಾ, ಕಾವೇರಿ, ಕೃಷ್ಣಾ, ಬ್ರಹ್ಮಪುತ್ರ, ಅರ್ಕಾವತಿ ಮತ್ತು ವೃಷಭಾವತಿ ನದಿಗಳೆಲ್ಲ ಯಾರಿಗೂ ಸೇರಿದ್ದಲ್ಲ.ನೀರಿಗೆ ಬಣ್ಣ, ರುಚಿ ಅಥವಾ ಆಕಾರವಿಲ್ಲ. ಪ್ರತಿಯೊಬ್ಬರಿಗೂ ನೀರು ಬೇಕು. ಜನರು ಏನು ಬೇಕಾದರೂ ಹೇಳುತ್ತಾರೆ” ಎಂದರು.
ಆರ್. ಅಶೋಕ್ ಅವರ ಸಮಸ್ಯೆ ಏನು ಎಂದು ನನಗೆ ತಿಳಿದಿಲ್ಲ. ಬಹುಶಃ ಅವರಿಗೆ ಏನಾದರೂ ಸಮಸ್ಯೆ ಇರಬಹುದು. ನನ್ನ ವೈಯಕ್ತಿಕ ನಂಬಿಕೆಗಳ ಬಗ್ಗೆ ಮಾತನಾಡುವ ಹಕ್ಕು ಯಾರಿಗೂ ಇಲ್ಲ. ನಂಬಿಕೆ ಮತ್ತು ಭಕ್ತಿ ನನ್ನ ವೈಯಕ್ತಿಕ ವಿಷಯಗಳು, “ಎಂದರು.
ಶಿವಕುಮಾರ್ ಅವರು ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ತತ್ ಕ್ಷಣ ಕರ್ನಾಟಕದಲ್ಲಿ ಬಡತನ ನಿರ್ಮೂಲನೆಯಾಗುತ್ತದೆಯೇ?” ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪುಶ್ನೆ ಮಾಡಿದ್ದರು.
ನಾನು ಕುಂಭಮೇಳಕ್ಕೆ ಹೋಗುತ್ತೇನೋ ಇಲ್ಲವೋ ಎಂಬುದು ಸಂಪೂರ್ಣವಾಗಿ ನನ್ನ ನಿರ್ಧಾರ. ಇದು ನನ್ನ ವೈಯಕ್ತಿಕ ನಂಬಿಕೆಯ ವಿಷಯ. ನಾನು ಹೋಗುವುದು ಅಥವಾ ಹೋಗದಿರುವುದು ನನ್ನ ವೈಯಕ್ತಿಕ” ಎಂದರು.
ಖರ್ಗೆಯವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, “ಅವರು ಅದನ್ನು ನಿರ್ದಿಷ್ಟ ಸಂದರ್ಭದಲ್ಲಿ ಹೇಳಿದ್ದಾರೆ, ಆದರೆ ಮಾಧ್ಯಮಗಳು ಅದನ್ನು ಏಕ ವಿವಾದ ಮಾಡುತ್ತಿವೆ?” ಎಂದು ಪ್ರಶ್ನಿಸಿದರು.
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…
ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…