ರಾಜ್ಯ ನ್ಯೂಸ್

ನನ್ನ ಸರ್ಕಾರದಲ್ಲಿ ತಲೆಹಾಕಬೇಡಿ ಎಂದು ಅಪ್ಪನಿಗೆ ಖಡಕ್ ವಾರ್ನಿಂಗ್ : ಕುಮಾರಸ್ವಾಮಿ..

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವಂತಹ ನೂತನ ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಗೊಂದಲಗಳ ಗೂಡಾಗಿದೆ. ಸದಾ ಕಚ್ಚಾಟದಲ್ಲೇ ಹದಿನೈದು ದಿನಗಳನ್ನು ಕಳೆದಿದ್ದಾರೆ. ಒಂದೆಡೆ ಸಚಿವ ಸಂಪುಟದಲ್ಲಿ ಸ್ಥಾನವನ್ನು ಪಡೆಯಲು ವಿಫಲರಾದ ಶಾಸಕರುಗಳ ಅಸಮಾಧಾನ ಸ್ಫೋಟಗೊಂಡಿದ್ದರೆ, ಮತ್ತೊಂದೆಡೆ ಖಾತೆ ಹಂಚಿಕೆಯಲ್ಲಿ ತಾವು ಇಷ್ಟಪಟ್ಟಿದ್ದ ಖಾತೆಗಳು ಸಿಕ್ಕಿಲ್ಲ ಎಂದು ಬಂಡಾಯವೆದ್ದವರ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಇವೆರಡರ ನಡುವೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸಿಲುಕಿ ನಲುಗಿ ಹೋಗಿದ್ದಾರೆ. ಜೊತೆ ಜೊತೆಗೇ ತಾವು ಮತ್ತೊಂದು ಪ್ರಮುಖ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ತಮ್ಮ ಕುಟುಂಬದ ಸದಸ್ಯರುಗಳ ಕಾಟ ತೀವ್ರವಾಗಿದೆ ಎನ್ನಲಾಗಿದೆ. ತಮ್ಮ ಸಹೋದರ ಎಚ್ ಡಿ ರೇವಣ್ಣ ಅವರು ತಮಗೆ ಸಂಬಂಧಪಟ್ಟಿಲ್ಲದ ಖಾತೆಗಳಿಗೂ ಮೂಗು ತೋರಿಸುತ್ತಿದ್ದಾರೆ ಎನ್ನುವ ಆಪಾದನೆ ಕೇಳಿಬಂದಿದೆ. ಅಧಿಕಾರಿಗಳನ್ನು ಬೇಕಾಬಿಟ್ಟಿ ವರ್ಗಾವಣೆ ಮಾಡುತ್ತಿದ್ದಾರೆ ಎನ್ನುವ ಸುದ್ದಿಯೂ ಹೊರಬಿದ್ದಿದೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಎಚ್ ಡಿ ರೇವಣ್ಣ ಅವರ ಈ ವರ್ತನೆ ಕುಮಾರಸ್ವಾಮಿಯವರಲ್ಲಿ ಬೇಸರ ತರಿಸಿದೆ. ಜೊತೆಗೆ ಸರ್ಕಾರದ ಉನ್ನತ ಅಧಿಕಾರಿಗಳು ಕೂಡ ಆಗಾಗ್ಗೆ ತಮ್ಮ ತಂದೆ ಎಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿ ಸಲಹೆ ಸೂಚನೆಗಳನ್ನು ಪಡೆಯುತ್ತಿರುವುದು ಕೂಡ ಕುಮಾರಸ್ವಾಮಿ ಅವರ ಕಣ್ಣು ಕೆಂಪಾಗಿಸಿದೆ. ಟೀಕೆಗಳಿಂದ ತಪ್ಪಿಸಿಕೊಳ್ಳಲು ನಮ್ಮ ಸರ್ಕಾರದ ವಿಷಯದಲ್ಲಿ ಸುಮ್ಮನೆ ಮೂಗು ತೂರಿಸಬೇಡಿ ಎಂದು ಕುಟುಂಬದ ಸದಸ್ಯರಿಗೆ ಸಿಎಂ ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇತ್ತ ತಮ್ಮ ತಂದೆ ಎಚ್ ಡಿ ದೇವೇಗೌಡ ಹಾಗೂ ಸಹೋದರ ಎಚ್ ಡಿ ರೇವಣ್ಣ ಅವರಿಗೆ ಬುದ್ಧಿ ಹೇಳಲು ಆಗದೆ, ಅವರನ್ನು ಶಿಸ್ತಿನಲ್ಲಿ ಇಡಲು ಆಗದೆ ಕುಮಾರಸ್ವಾಮಿಯವರು ಪೇಚಿಗೆ ಸಿಲುಕಿ ಒದ್ದಾಡುತ್ತಿರುವುದಂತೂ ಸತ್ಯ.

ಸರ್ಕಾರ ರಚನೆಯಲ್ಲಿ ಹಾಗೂ ಸಂಪುಟ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜೆಡಿಎಸ್ ನ ವರಿಷ್ಠ ನಾಯಕ ಎಚ್ ಡಿ ದೇವೇಗೌಡರು ಈಗ ಕಳೆದ ಕೆಲ ದಿನಗಳಿಂದ ಮೌನಕ್ಕೆ ಶರಣಾಗಿದ್ದಾರೆ. ಸರ್ಕಾರದ ತಂಟೆಗೆ ಬರಬೇಡಿ ಎಂದು ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ದೇವೇಗೌಡರವರು ಮೌನಕ್ಕೆ ಶರಣಾಗಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ‌. ಕೆಲ ದಿನಗಳ ಹಿಂದೆ ಅತ್ಯಂತ ಕ್ರಿಯಾಶೀಲರಾಗಿ ಕಾಣಿಸಿಕೊಳ್ಳುತ್ತಿದ್ದ ದೇವೇಗೌಡರು ಇದೀಗ ಹೆಚ್ಚಾಗಿ ರಾಜಕೀಯ ಚಟುವಟಿಕೆಗಳಲ್ಲಿ ಕಂಡು ಬರುತ್ತಿಲ್ಲ. ಕಳೆದ ಜೂನ್ 2 ರಂದು ಪಕ್ಷದ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ದೇವೇಗೌಡರು, ಆ ನಂತರ ಯಾವುದೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ದೇವೇಗೌಡರು ಇಷ್ಟು ಬೇಗ ಒಬ್ಬಂಟಿಯಾದರೇ ಎಂಬ ಪ್ರಶ್ನೆಗಳು ಕಾಡುತ್ತಿವೆ.

ಮಾಧ್ಯಮಗಳಿಗೂ ಯಾವುದೇ ಪ್ರತಿಕ್ರಿಯೆಗಳನ್ನು ದೇವೇಗೌಡರು ನೀಡುತ್ತಿಲ್ಲ. ಕಳೆದ ಹತ್ತು ದಿನಗಳಿಂದ ದೇವೇಗೌಡರವರು ಬಹುತೇಕ ತಮ್ಮ ಪದ್ಮನಾಭ ನಗರದ ನಿವಾಸದಲ್ಲಿಯೇ ಮೌನಕ್ಕೆ ಶರಣಾಗಿದ್ದಾರೆ. ಸರ್ಕಾರ ರಚನೆಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿ ಅಷ್ಟೊಂದು ಕ್ರಿಯಾಶೀಲರಾಗಿದ್ದ ದೇವೇಗೌಡರು ಇದೇಕೆ ಇಷ್ಟೊಂದು ಮೌನಕ್ಕೆ ಶರಣಾಗಿದ್ದಾರೆ? ಕುಮಾರಸ್ವಾಮಿ ಅವರೇನಾದರೂ ತಮ್ಮ ಸರ್ಕಾರದ ತಂಟೆಗೆ ಬರಬೇಡಿ ಎಂದು ತಂದೆಗೆ ಸೂಚನೆ ನೀಡಿದ್ದಾರೆಯೇ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಇಡೀ ಸಮ್ಮಿಶ್ರ ಸರ್ಕಾರ ವಿಧಾನಸೌಧದಲ್ಲಿ ನಡೆಯುವುದಿಲ್ಲ. ಬದಲಾಗಿ ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ನಡೆಯುತ್ತದೆ ಎಂಬ ಟೀಕೆಗಳು ಈಗಾಗಲೇ ಸರ್ಕಾರದ ಮೇಲೆ ವ್ಯಕ್ತವಾಗಿದೆ. ಈ ವಿಷಯವನ್ನು ಇಟ್ಟುಕೊಂಡು ಈಗಾಗಲೇ ಬಿಜೆಪಿಯ ನಾಯಕರುಗಳು ಸರ್ಕಾರವನ್ನು ಟೀಕಿಸಿದ್ದಾರೆ. ಇನ್ನು ಕಾಂಗ್ರೆಸ್ ನ ಹಲವು ಹಿರಿಯ ನಾಯಕರುಗಳೂ ಕೂಡ ತಮ್ಮ ಆಪ್ತರ ಬಳಿ ಇದೇ ವಿಷಯವನ್ನು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಈ ಇಳಿವಯಸ್ಸಿನಲ್ಲಿಯೂ ಇಡೀ ರಾಜ್ಯದ ಮೂಲೆ ಮೂಲೆ ಸುತ್ತಿ ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡುವಂತೆ ಮತದಾರರಿಗೆ ಕೈ ಮುಗಿದು ಕೇಳಿಕೊಂಡಿದ್ದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಇದೀಗ ತಮ್ಮ ಮಗ ಮುಖ್ಯಮಂತ್ರಿಯಾದ ನಂತರ ಸಾರ್ವಜನಿಕ ಜೀವನದಿಂದ ಕಾಣಿಸಿಕೊಳ್ಳದೇ ಇರುವುದು ಹಲವು ಅನುಮಾನಗಳನ್ನು ಹುಟ್ಟಿಸಿರುವುದಂತೂ ಸತ್ಯ. ದೇವೇಗೌಡರು ಏಕಾಂಗಿಯಾಗಿದ್ದಾರೆಯೇ ಎನ್ನುವ ಪ್ರಶ್ನೆ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ ದಳಪತಿಗಳ ಉತ್ತರ ನೀಡಬೇಕಾಗಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago