ನನ್ನ ಸೋಲಿಗೆ ನಾನೇ ಹೊಣೆ ; ರಾಜ್ಯದ್ಯಾಂತ ಪ್ರವಾಸ ಕೈಗೊಂಡು ಜನರ ಕಷ್ಟ-ಸುಖಗಳನ್ನು ಅರಿಯುವ ಪ್ರಯತ್ನ ಮಾಡುತ್ತೇನೆ : ನಿಖಿಲ್ ಕುಮಾರಸ್ವಾಮಿ -Vishwanews24
ಬೆಂಗಳೂರು: ಮಂಡ್ಯದಲ್ಲಿ ನನ್ನ ಸೋಲಿಗೆ ನಾನೇ ಕಾರಣ ಎಂದು ಜೆಡಿಎಸ್ ಪರಾಭವ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.
ಮಂಡ್ಯ ರಾಜಕರಣದ ಬಗ್ಗೆ ಮಾತನಾಡಿರುವ ಅವರು ನೂತನ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಸೋಲಿನ ಬಗ್ಗೆ ಮಾತನಾಡಿದ ಅವರು ನನ್ನ ಸೋಲಿಗೆ ನಾನು ಹೊಣೆ. ಯಾವುದೇ ಶಾಸಕರು, ಎಂಎಲ್ಸಿ, ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖ್ಯಸ್ಥ ದೇವೇಗೌಡರು ಯಾರು ಹೊಣೆಯಲ್ಲ ಎಂದು ತಮ್ಮ ಸೋಲನ್ನು ಪರಾಮರ್ಶಿಸಿಕೊಂಡಿದ್ದಾರೆ.
ಮಂಡ್ಯ ಜನತೆ ನಿಖಿಲ್ ಕುಮಾರಸ್ವಾಮಿಯನ್ನು ತಿರಸ್ಕರಿಸಿದ್ದಾರೆ. ಕಾರ್ಯಕರ್ತರ ನಿರೀಕ್ಷೆಯನ್ನು ಹುಸಿ ಮಾಡಿರುವುದಕ್ಕೆ ಅವರಿಗೆ ಕ್ಷಮೆ ಕೋರುತ್ತೇನೆ. ಮುಂದಿನ ದಿನಗಳಲ್ಲಿ ಮಂಡ್ಯ ಜನರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ರಾಜ್ಯದ್ಯಾಂತ ಪ್ರವಾಸ ಕೈಗೊಂಡು ಜನರ ಕಷ್ಟ-ಸುಖಗಳನ್ನು ಅರಿಯುವ ಪ್ರಯತ್ನ ಮಾಡುತ್ತೇನೆ. ಈ ಬಗ್ಗೆ ಶೀಘ್ರದಲ್ಲಿ ಸುದ್ದಿಗೋಷ್ಠಿ ನಡಸಿ ಮುಂದಿನ ಯೋಜನೆಯಗಳ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ನಿಖಿಲ್ ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ರೆಬಲ್ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಅವರ ಅಮರ್ ಚಿತ್ರ ಮೇ 31 ರಂದು ಬಿಡುಗಡೆಯಾಗಲಿದ್ದು, ನಿಖಿಲ್ ಅವರಿಗೆ ಶುಭಾಶಯ ಕೋರಿದ್ದಾರೆ.
