ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ 15 ರಿಂದ 16 ಸ್ಥಾನಗಳನ್ನು ಗೆಲುವು ಸಾಧಿಸುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದ್ದಾರೆ.
ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈತ್ರಿ ಸರ್ಕಾರ ಜನರ ಭಾವನೆಗಳಿಗೆ ಸರಿಯಾಗಿ ಸ್ಪಂಧಿಸಿಲ್ಲ ಎಂದರು.
ನಾನು ಸೋತರೂ ಚಿಕ್ಕಬಳ್ಳಾಪುರದ ಜನರ ಮೇಲೆ ಪ್ರೀತಿ ವಿಶ್ವಾಸ ಮುಂದುವರಿಸುತ್ತೇನೆ. ಮುಂದೆ ಚುನಾವಣೆಗೆ ನಿಲ್ಲುತ್ತೇನೋ ಗೊತ್ತಿಲ್ಲ ಆದರೂ ಕ್ಷೇತ್ರದ ಜನರೊಂದಿಗೆ ಇರುತ್ತೇನೆ ಎಂದರು.
ಚುನಾವಣೆಯಲ್ಲಿ ನಮ್ಮವರಿಂದಲೂ ಮೋಸ ಆಯಿತು. ಅಧಿಕಾರ ಪಡೆಯುವ ಆಸೆಯಿಂದ ಮೋಸ ಮಾಡಿದ್ದಾರೆ. ಒಂದು ವೇಳೆ ಈ ಬಾರಿ ರಾಜ್ಯದಲ್ಲಿ ಮೈತ್ರಿ ಇಲ್ಲದೆ ಇದ್ದಿದ್ದರೆ 15 ರಿಂದ 16 ಸ್ಥಾನ ಖಂಡಿತಾ ಗೆಲ್ಲುತ್ತಿದ್ದೆವು. ಚಿಕ್ಕಬಳ್ಳಾಪುರದಲ್ಲಿ ನನ್ನ ಸೋಲಿಗೆ ನೂರಕ್ಕೆ ನೂರರಷ್ಟು ಮೈತ್ರಿಯೇ ಕಾರಣ ಎಂದು ಹೇಳಿದರು.
ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರು ಇಂದು ಒಂದು ಹೇಳಿಕೆ ಕೊಡುತ್ತಾರೆ. ನಾಳೆ ಅದಕ್ಕೆ ವ್ಯತಿರಿಕ್ತವಾದ ಹೇಳಿಕೆ ಕೊಡುತ್ತಾರೆ. ಆದರೆ, ನಾನು ದೇವೇಗೌಡರ ರೀತಿ ಹೇಳಿಕೆ ಕೊಡುವುದಿಲ್ಲ. ನಾನು ಕೊಟ್ಟ ಹೇಳಿಕೆಯನ್ನು ವಾಪಸ್ ಪಡೆಯುವುದಿಲ್ಲ. ದೇವೇಗೌಡರ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ ಎಂದು ಮೊಯ್ಲಿ ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…