ದುಬೈ: ‘ನನ್ನ ಸ್ವಂತ ಇಚ್ಛೆಯಿಂದ ಅಬುಧಾಬಿಗೆ ಹೋಗಿದ್ದೇನೆ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ’ ಎಂದು ಕೇರಳದ 19 ವರ್ಷದ ಕ್ರೈಸ್ತ ಹುಡುಗಿ ಸಿಯಾನಿ ಬೆನ್ನಿ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ವಾಸವಾಗಿರುವ ಸಿಯಾನಿ ಬೆನ್ನಿಯ ಪೋಷಕರು ಮೂಲತಃ ಕೇರಳದ ಕೋಝಿಕೋಡ್ ನವರಾಗಿದ್ದು ಮಗಳು ಕಣ್ಮರೆಯ ಬೆನ್ನಲ್ಲೇ, ಸಿಯಾನಿ ಬೆನ್ನಿಯ ಪೋಷಕರು ನವದೆಹಲಿಯ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಮಾತ್ರವಲ್ಲದೇ ಆಕೆಯ ಕಾಲೇಜು ಸಹಪಾಠಿಗಳು, ” ವಿಶ್ವದಾದ್ಯಂತ ಹಾನಿ ಉಂಟುಮಾಡುವ ಶಕ್ತಿಯೊಂದು ಭಾರತೀಯ ಪ್ರಜೆಯನ್ನು ಅಪಹರಿಸಿದೆ ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಸಿಯಾನಿ ಬೆನ್ನಿ ಕಿಡ್ನಾಪ್ ಮಾಡಿ ಭಯೋತ್ಪಾದಕ ತಂಡದಲ್ಲಿ ಸೇರಲು ಒತ್ತಾಯಿಸಲಾಗಿದೆ ಎಂದು ವರದಿ ಪ್ರಸಾರವಾಗಿತ್ತು.
ಈ ಎಲ್ಲಾ ಬೆಳವಣಿಗೆಯ ಬಳಿಕ ಭಾನುವಾರ ಗಲ್ಫ್ ನ್ಯೂಸ್ಗೆ ಪ್ರತಿಕ್ರಿಯೆ ನೀಡಿರುವ ಸಿಯಾನಿ ಬೆನ್ನಿ, “ಇದು ನಿಜವಲ್ಲ. ನಾನು ನನ್ನ ಸ್ವಇಚ್ಚೆಯಿಂದ ಅಬುಧಾಬಿಗೆ ಬಂದಿದ್ದೇನೆ. ನನ್ನ ಮೇಲೆ ಯಾವುದೇ ಬಾಹ್ಯ ಒತ್ತಡವಿಲ್ಲ, ನಾನು ಭಾರತದ ವಯಸ್ಕ ಪ್ರಜೆಯಾಗಿದ್ದು, ನನ್ನ ಸ್ವಂತ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ” ಎಂದು ಹೇಳಿದ್ದಾರೆ.
ನವದೆಹಲಿಯ ಮೇರಿ ಆಂಡ್ ಜೀಸಸ್ ಕಾಲೇಜಿನಲ್ಲಿ ಸಿಯಾನಿ ಅಂತಿಮ ಪದವಿ ವಿದ್ಯಾರ್ಥಿನಿಯಾಗಿದ್ದು, ನಾಪತ್ತೆಯಾಗುವ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 11 ಗಂಟೆಯವರೆಗೆ ತರಗತಿಗೆ ಹಾಜರಾಗಿದ್ದರು. ಆದರೆ ಆ ಬಳಿಕ ಅದೇ ದಿನ ಮಧ್ಯಾಹ್ನ, 2.45ರ ವೇಳೆಗೆ ಗೋ-ಏರ್ ವಿಮಾನವನ್ನೇರಿ ಅಬುಧಾಬಿಗೆ ಪ್ರಯಾಣಿಸಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…