ದುಬೈ: ‘ನನ್ನ ಸ್ವಂತ ಇಚ್ಛೆಯಿಂದ ಅಬುಧಾಬಿಗೆ ಹೋಗಿದ್ದೇನೆ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ’ ಎಂದು ಕೇರಳದ 19 ವರ್ಷದ ಕ್ರೈಸ್ತ ಹುಡುಗಿ ಸಿಯಾನಿ ಬೆನ್ನಿ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ವಾಸವಾಗಿರುವ ಸಿಯಾನಿ ಬೆನ್ನಿಯ ಪೋಷಕರು ಮೂಲತಃ ಕೇರಳದ ಕೋಝಿಕೋಡ್ ನವರಾಗಿದ್ದು ಮಗಳು ಕಣ್ಮರೆಯ ಬೆನ್ನಲ್ಲೇ, ಸಿಯಾನಿ ಬೆನ್ನಿಯ ಪೋಷಕರು ನವದೆಹಲಿಯ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಮಾತ್ರವಲ್ಲದೇ ಆಕೆಯ ಕಾಲೇಜು ಸಹಪಾಠಿಗಳು, ” ವಿಶ್ವದಾದ್ಯಂತ ಹಾನಿ ಉಂಟುಮಾಡುವ ಶಕ್ತಿಯೊಂದು ಭಾರತೀಯ ಪ್ರಜೆಯನ್ನು ಅಪಹರಿಸಿದೆ ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಸಿಯಾನಿ ಬೆನ್ನಿ ಕಿಡ್ನಾಪ್ ಮಾಡಿ ಭಯೋತ್ಪಾದಕ ತಂಡದಲ್ಲಿ ಸೇರಲು ಒತ್ತಾಯಿಸಲಾಗಿದೆ ಎಂದು ವರದಿ ಪ್ರಸಾರವಾಗಿತ್ತು.
ಈ ಎಲ್ಲಾ ಬೆಳವಣಿಗೆಯ ಬಳಿಕ ಭಾನುವಾರ ಗಲ್ಫ್ ನ್ಯೂಸ್ಗೆ ಪ್ರತಿಕ್ರಿಯೆ ನೀಡಿರುವ ಸಿಯಾನಿ ಬೆನ್ನಿ, “ಇದು ನಿಜವಲ್ಲ. ನಾನು ನನ್ನ ಸ್ವಇಚ್ಚೆಯಿಂದ ಅಬುಧಾಬಿಗೆ ಬಂದಿದ್ದೇನೆ. ನನ್ನ ಮೇಲೆ ಯಾವುದೇ ಬಾಹ್ಯ ಒತ್ತಡವಿಲ್ಲ, ನಾನು ಭಾರತದ ವಯಸ್ಕ ಪ್ರಜೆಯಾಗಿದ್ದು, ನನ್ನ ಸ್ವಂತ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ” ಎಂದು ಹೇಳಿದ್ದಾರೆ.
ನವದೆಹಲಿಯ ಮೇರಿ ಆಂಡ್ ಜೀಸಸ್ ಕಾಲೇಜಿನಲ್ಲಿ ಸಿಯಾನಿ ಅಂತಿಮ ಪದವಿ ವಿದ್ಯಾರ್ಥಿನಿಯಾಗಿದ್ದು, ನಾಪತ್ತೆಯಾಗುವ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 11 ಗಂಟೆಯವರೆಗೆ ತರಗತಿಗೆ ಹಾಜರಾಗಿದ್ದರು. ಆದರೆ ಆ ಬಳಿಕ ಅದೇ ದಿನ ಮಧ್ಯಾಹ್ನ, 2.45ರ ವೇಳೆಗೆ ಗೋ-ಏರ್ ವಿಮಾನವನ್ನೇರಿ ಅಬುಧಾಬಿಗೆ ಪ್ರಯಾಣಿಸಿದ್ದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…