ದುಬೈ: ‘ನನ್ನ ಸ್ವಂತ ಇಚ್ಛೆಯಿಂದ ಅಬುಧಾಬಿಗೆ ಹೋಗಿದ್ದೇನೆ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ’ ಎಂದು ಕೇರಳದ 19 ವರ್ಷದ ಕ್ರೈಸ್ತ ಹುಡುಗಿ ಸಿಯಾನಿ ಬೆನ್ನಿ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ವಾಸವಾಗಿರುವ ಸಿಯಾನಿ ಬೆನ್ನಿಯ ಪೋಷಕರು ಮೂಲತಃ ಕೇರಳದ ಕೋಝಿಕೋಡ್ ನವರಾಗಿದ್ದು ಮಗಳು ಕಣ್ಮರೆಯ ಬೆನ್ನಲ್ಲೇ, ಸಿಯಾನಿ ಬೆನ್ನಿಯ ಪೋಷಕರು ನವದೆಹಲಿಯ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಮಾತ್ರವಲ್ಲದೇ ಆಕೆಯ ಕಾಲೇಜು ಸಹಪಾಠಿಗಳು, ” ವಿಶ್ವದಾದ್ಯಂತ ಹಾನಿ ಉಂಟುಮಾಡುವ ಶಕ್ತಿಯೊಂದು ಭಾರತೀಯ ಪ್ರಜೆಯನ್ನು ಅಪಹರಿಸಿದೆ ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಸಿಯಾನಿ ಬೆನ್ನಿ ಕಿಡ್ನಾಪ್ ಮಾಡಿ ಭಯೋತ್ಪಾದಕ ತಂಡದಲ್ಲಿ ಸೇರಲು ಒತ್ತಾಯಿಸಲಾಗಿದೆ ಎಂದು ವರದಿ ಪ್ರಸಾರವಾಗಿತ್ತು.
ಈ ಎಲ್ಲಾ ಬೆಳವಣಿಗೆಯ ಬಳಿಕ ಭಾನುವಾರ ಗಲ್ಫ್ ನ್ಯೂಸ್ಗೆ ಪ್ರತಿಕ್ರಿಯೆ ನೀಡಿರುವ ಸಿಯಾನಿ ಬೆನ್ನಿ, “ಇದು ನಿಜವಲ್ಲ. ನಾನು ನನ್ನ ಸ್ವಇಚ್ಚೆಯಿಂದ ಅಬುಧಾಬಿಗೆ ಬಂದಿದ್ದೇನೆ. ನನ್ನ ಮೇಲೆ ಯಾವುದೇ ಬಾಹ್ಯ ಒತ್ತಡವಿಲ್ಲ, ನಾನು ಭಾರತದ ವಯಸ್ಕ ಪ್ರಜೆಯಾಗಿದ್ದು, ನನ್ನ ಸ್ವಂತ ನಿರ್ಧಾರ ತೆಗೆದುಕೊಳ್ಳಬಹುದಾಗಿದೆ” ಎಂದು ಹೇಳಿದ್ದಾರೆ.
ನವದೆಹಲಿಯ ಮೇರಿ ಆಂಡ್ ಜೀಸಸ್ ಕಾಲೇಜಿನಲ್ಲಿ ಸಿಯಾನಿ ಅಂತಿಮ ಪದವಿ ವಿದ್ಯಾರ್ಥಿನಿಯಾಗಿದ್ದು, ನಾಪತ್ತೆಯಾಗುವ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 11 ಗಂಟೆಯವರೆಗೆ ತರಗತಿಗೆ ಹಾಜರಾಗಿದ್ದರು. ಆದರೆ ಆ ಬಳಿಕ ಅದೇ ದಿನ ಮಧ್ಯಾಹ್ನ, 2.45ರ ವೇಳೆಗೆ ಗೋ-ಏರ್ ವಿಮಾನವನ್ನೇರಿ ಅಬುಧಾಬಿಗೆ ಪ್ರಯಾಣಿಸಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…