Featured

ನನ್ನ ಸ್ವಾರ್ಥಕ್ಕೆ ಏನು ಮಾಡಿಕೊಂಡಿಲ್ಲ.. ಜನರ ಸೇವೆಗಾಗಿ ರಾಜಕೀಯಕ್ಕೆ ಬಂದವನು : ವಿನಯ್ ಕುಮಾರ್ ಸೊರಕೆ – Vishwanews24

ನಾನು‌ ವ್ಯಾಪಾರಸ್ಥನಲ್ಲ..‌ನನ್ನ ಸ್ವಾರ್ಥಕ್ಕೆ ಏನು ಮಾಡಿಕೊಂಡಿಲ್ಲ.. ಜನರ ಸೇವೆಗಾಗಿ ರಾಜಕೀಯಕ್ಕೆ ಬಂದವನು.. ವಿನಯ್ ಕುಮಾರ್ ಸೊರಕೆ

ಉಡುಪಿ: ಕಳೆದ ಚುನಾವಣೆಯಲ್ಲಿ ನನ್ನ ಬಗ್ಗೆ ಬಹಳಷ್ಟು ಅಪ ಪ್ರಚಾರ ಮಾಡಿ ಚುನಾವಣೆಯಲ್ಲಿ ಸೋಲಾಯ್ತು .ಈ ಚುನಾವಣೆಯಲ್ಲಿ ಕೂಡಾ ನನ್ನ ಬಗ್ಗೆ ಅಪ ಪ್ರಚಾರ ಮತ್ತೆ ಶುರುವಾಗಿದೆ.‌ನನ್ನ‌ ಬಗ್ಗೆ ಮತದಾರರು ತಿಳಿದುಕೊಂಡಿದ್ದಾರೆ ಅನ್ನೋ‌ ನಂಬಿಕೆ ನನಗಿದೆ. ಅಪಪ್ರಚಾರ ಮಾಡುವವರಿಗೆ ಈ‌ ಬಾರಿಯ ಚುನಾವಣೆಯಲ್ಲಿ ಜನ ಸರಿಯಾದ ಪಾಠ ಕಲಿಸ್ತಾರೆ ಅಂತಾ ಕಾಪು‌‌ ಚುನಾವಣಾ ಅಭ್ಯರ್ಥಿ ‌ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಮುದ್ರಾಡಿ ಬಿಲ್ಲವ ಸಮಾಜದ ಸಮಾಜ‌ಸೇವಾ ಸಂಘಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ನನ್ನ ಜೀವನ ತೆರೆದ ಪುಸ್ತಕ..‌ ನಿಮಗೆಲ್ಲ ನನ್ನ ಬಗ್ಗೆ ಚೆನ್ನಾಗಿ ಗೊತ್ತಿದೆ.ಕೋಟಿ ಚೆನ್ನಯ್ಯ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಗಳು‌ ನಮ್ಮ ಸಮಾಜದ ಮಹಾನ್ ಶಕ್ತಿ..‌ಇತರ ಎಲ್ಲಾ ಸಮುದಾಯದಕ್ಕೆ ಆದರ್ಶಪ್ರಾಯವಾದ ಚಿಂತನೆಯನ್ನು ಬಿತ್ತಿದವರು ನಾರಾಯಣ ಗುರುಗಳು..‌ಈ‌ ಭಾಗದ ಅಭಿವ್ರದ್ಧಿಗಾಗಿ ಸಾಕಷ್ಟು ಅನುದಾನವನ್ನು ಶಾಸಕನಾಗಿದ್ದ ಅವಧಿಯಲ್ಲಿ‌ ಒದಗಿಸಿಕೊಟ್ಟ ತ್ರಪ್ತಿ ನನಗಿದೆ. ಇನ್ನಷ್ಟು ಕೆಲಸವನ್ನು ಮಾಡಲು‌ ಶಕ್ತಿಯನ್ನು‌ ನೀವು ಮನ್ ತುಂಬಬೇಕಿದೆ ಅಂತಾ ಸೊರಕೆ ಹೇಳಿದ್ದಾರೆ.

ಬಿಲ್ಲವ ಮುಖಂಡರಾದ ಸುರೇಶ ಸುವರ್ಣ,ನವೀನ್ ಚಂದ್ರ ಸುವರ್ಣ,ಶಿವಾಜಿ ಸುವರ್ಣ,ಆನಂದ ಪೂಜಾರಿ, ಸುಧೀರ್,ಶೇಖರ ಶಾಂತಿ, ರೋಹನ್ ಕುಮಾರ್, ಕ್ರಷ್ಣ ಪೂಜಾರಿ, ಗುಣಕರ ಪೂಜಾರಿ,, ರವಿರಾಜ್, ಡೇವಿಡ್, ಅಜಿತ್ ಪೂಜಾರಿ, ಸುಜಾತ ಸುವರ್ಣ, ಜಯಶ್ರೀ ಉಪಸ್ಥಿತರಿದ್ದರು.

ಬಾಕ್ಸ್ ಐಟಮ್: ನಾನು ವ್ಯಾಪಾರಸ್ಥನಲ್ಲ‌. ಸುಮಾರು 40 ವರ್ಷಗಳಿಂದ ಯಾವುದೇ ಕಪ್ಪು ಚುಕ್ಕೆಯಿಲ್ಲದೆ ಮಾಡ್ತಾ ಬಂದಿದೀನಿ..ಜನಸೇವೆಗಾಗಿ ನನ್ನ‌ ಜೀವನವನ್ನು ಮುಡಿಪಾಗಿಟ್ಟಿದ್ದೇನೆ.‌ ಕಾಪು ಕ್ಷೇತ್ರದಲ್ಲಿ ಇತಿಹಾಸ ಕಂಡು ಕೇಳರಿಯದ ಅಭಿವೃದ್ಧಿ ಯನ್ನು ಮಾಡಿದೀನಿ ಅನ್ನೋ‌ ಖುಷಿ‌
ಇದೆ. ಈ ಬಾರಿ ಇನ್ನೊಮ್ಮೆ ಅವಕಾಶ ಕೊಟ್ಟರೆ ಕಾಪು ಜಗತ್ತಿನ ಭೂಪಟದಲ್ಲಿ ಗುರುತಿಸುವಂತೆ ನಿಸ್ಸಂದೇಹವಾಗಿ ಮಾಡ್ತಿನಿ ಅನ್ನೋ ವಾಗ್ದಾನ ಮಾಡ್ತಿನಿ ಅಂತಾ ಸೊರಕೆ ಹೇಳಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

22 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago