ಕಲಬುರಗಿ : ನನ್ನ ಹುಟ್ಟುಹಬ್ಬದ ಕಾರ್ಯಕ್ರಮದ ಬಗ್ಗೆ ಬಿಜೆಪಿಯವರಿಗೆ ಭಯ ಶುರುವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಕಾರ್ಯಕರ್ತರು ಸೇರುತ್ತಾರೆ. ಹೀಗಾಗಿ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ನಾನೂ ಕೂಡ ಆ ಕಾರ್ಯಕ್ರಮಕ್ಕೆ ಹೋಗಿದ್ದೆ ಎಂದರು.
ನನ್ನ ಹುಟ್ಟುಹಬ್ಬ ಆಚರಿಸಿಕೊಂಡರೆ ಬಿಜೆಪಿಯವರಿಗೆ ಯಾಕೆ ಹೆದರಿಕೆ ನನ್ನ ಜನ್ಮದಿನದ ಕಾರ್ಯಕ್ರಮಕ್ಕೆ ನಮ್ಮವರಿಗೆ ಆತಂಕ ಇಲ್ಲ. ಬಿಜೆಪಿಯವರಿಗೆ ಹೆದರಿಕೆ ಶುರುವಾಗಿದೆ ಎಂದರು
ದೇವನೂರು ಮಹಾದೇವ ಅವರ ಆರ್.ಎಸ್ಎಸ್ ಆಳ ಮತ್ತು ಅಗಲ ಪುಸ್ತಕ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ದಾಖಲಾತಿ ಸಮೇತ ದೇವನೂರು ಮಹಾದೇವ ಅವರು ಪುಸ್ತಕ ಬರೆದಿದ್ದಾರೆ. ಸತ್ಯ ಹೇಳಿದ್ರೆ ಆರ್ ಎಸ್ಎಸ್ ನವರಿಗೆ ಕೋಪ ಬರುತ್ತದೆ ಎಂದು ಹೇಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…