ಪಟನಾ: ಬಿಹಾರ ಚುನಾವಣಾ ಪ್ರಚಾರದ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ರೋಹ್ತಾಸ್ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಗೆ ನಿಗದಿತ ಸಮಯಕ್ಕಿಂತ ಒಂದು ಗಂಟೆ 30 ನಿಮಿಷ ತಡವಾಗಿ ಆಗಮಿಸಿದರು. ಈ ತಡವಾಗುವಿಕೆಗೆ ಕಾರಣ ವಿವರಿಸುತ್ತಾ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನಕ್ಕೆ ಆದ್ಯತೆ ನೀಡಿದ ಕಾರಣ ನಾನು ಹೆಲಿಕಾಪ್ಟರ್ನಲ್ಲಿಯೇ ಕಾದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಸಭೆಯಲ್ಲಿ ಮಾತನಾಡಿದ ಖರ್ಗೆ “ನಾನು ಸಮಯಕ್ಕೆ ಸರಿಯಾಗಿ ಹೊರಟಿದ್ದೆ. ಆದರೆ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗಳು, ಪ್ರಧಾನಿಯವರ ವಿಮಾನ ಹೊರಡುವವರೆಗೆ ಕಾಯಿರಿ ಎಂದು ಹೇಳಿದರು. ಅದರ ಪರಿಣಾಮವಾಗಿ ನಾನು ಹೆಲಿಕಾಪ್ಟರ್ನಲ್ಲೇ ಸುಮಾರು 1.5 ಗಂಟೆ ಕಾಲ ಕುಳಿತೇ ಇರಬೇಕಾಯಿತು. ಇದೇ ಬಿಜೆಪಿ ಸರ್ಕಾರದ ನಿಜ ಸ್ವರೂಪ ಅವರು ಸದಾ ನಮ್ಮ ದಾರಿಗೆ ಅಡ್ಡಬರುತ್ತಾರೆ,” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಖರ್ಗೆ ತಮ್ಮ ಭಾಷಣದಲ್ಲಿ ಪ್ರಧಾನಿಯವರ ವಿದೇಶ ಪ್ರವಾಸಗಳನ್ನೂ ಟೀಕಿಸಿದರು. “ಮೋದಿಯವರು ತಮ್ಮ ಹೆಚ್ಚಿನ ಸಮಯವನ್ನು ವಿದೇಶಗಳಲ್ಲಿ ಕಳೆಯುತ್ತಾರೆ. ದೇಶದ ಚುನಾವಣೆಗಳು ಬಂದಾಗ ಮಾತ್ರ ಅವರು ಇಲ್ಲಿ ಕಾಣಿಸಿಕೊಳ್ಳುತ್ತಾರೆ. ಈಗ ಪಂಚಾಯತ್ ಮತ್ತು ಪುರಸಭೆ ಚುನಾವಣೆಗಳಿಗೂ ಪ್ರಚಾರ ಮಾಡಲು ಬರುವಂತಾಗಿದೆ,” ಎಂದು ವ್ಯಂಗ್ಯವಾಡಿದರು. ಬಿಹಾರದಲ್ಲಿ ನಡೆಯುತ್ತಿರುವ ಪ್ರಚಾರಯಾತ್ರೆಯಲ್ಲಿ ಖರ್ಗೆ ಅವರು ಹಲವು ಸಭೆಗಳಲ್ಲಿ ಭಾಗವಹಿಸುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಲವನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…