Featured

ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ  -vishwanews24

ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ

ನವದೆಹಲಿ: ದೇಶದ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆಯು  ಕೊನೆಯ ಹಂತಕ್ಕೆ ಬಂದಿದೆ. ಈಗಾಗಲೇ ಐದು ಹಂತದ ಮತದಾನ ಮುಕ್ತಾಯಗೊಂಡಿದ್ದು, ಇನ್ನೂ ಎರಡು ಹಂತದ ಮತದಾನ ಬಾಕಿ ಇದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆಯೇ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್‌ ವಾದ್ರಾ  ಅವರು ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, “ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ  ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ” ಎಂದಿದ್ದಾರೆ.

ಎಎನ್‌ಐ ಜತೆ ಮಾತನಾಡುವಾಗ, ನೀವು ರಾಜಕೀಯ ಪ್ರವೇಶಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. “ನಾನು ದೇಶದ ಸೇವೆ ಮಾಡುತ್ತಿದ್ದೇನೆ. ನಾನು ರಾಜಕೀಯ ಪ್ರವೇಶಿಸುವುದಿದ್ದರೆ, ನನ್ನ ಸಮಾಜ ಸೇವೆ, ನನ್ನ ಕೆಲಸ ಹಾಗೂ ನನ್ನ ಹೆಸರು ಬಳಸಿ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿಕೊಂಡು ನಾನು ರಾಜಕೀಯ ಪ್ರವೇಶಿಸುವುದಿಲ್ಲ. ಹೀಗೆ ಹೇಳಿದ ಮಾತ್ರಕ್ಕೆ ನಾನು ಗಾಂಧಿ ಕುಟುಂಬದ ಸದಸ್ಯ ಅಲ್ಲ ಎಂಬ ಅರ್ಥವಲ್ಲ. ಆದರೆ, ನನ್ನ ಹೆಸರು ಬಳಸಿಯೇ ನಾನು ರಾಜಕೀಯ ಪ್ರವೇಶಿಸುತ್ತೇನೆ” ಎಂದು ಹೇಳಿದರು.

“ರಾಜಕೀಯದಲ್ಲಿ ಬದಲಾವಣೆಯಾಗಬೇಕಿದೆ. ನಾನು ರೈತರು, ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೌದು, ಸೋನಿಯಾ ಗಾಂಧಿ ಸೇರಿ ಗಾಂಧಿ ಕುಟುಂಬದ ಹೆಸರು ಬಳಸಿದರೆ, ಅವರಿಂದ ಸಲಹೆ ಪಡೆದರೆ ನನಗೆ ಅನುಕೂಲವಾಗಬಹುದು. ಆದರೆ, ನನ್ನ ಕೆಲಸದಿಂದ ನಾನು ರಾಜಕೀಯಕ್ಕೆ ಬರಲು ಇಷ್ಟಪಡುತ್ತೇನೆ. ಹಾಗಂತ, ರಾಜಕೀಯ ಪ್ರವೇಶಿಸಲು ನಾನು ಸಮಾಜ ಸೇವೆ ಮಾಡುತ್ತಿಲ್ಲ. ಸೇವೆಯು ನನಗೆ ಖುಷಿ ಕೊಡುವ ವಿಚಾರವಾಗಿದೆ” ಎಂದು ಸಂದರ್ಶನದ ವೇಳೆ ಹೇಳಿದರು.

ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಕೂಡ ರಾಬರ್ಟ್‌ ವಾದ್ರಾ ವಾಗ್ದಾಳಿ ನಡೆಸಿದರು. “ಕಳೆದ 10 ವರ್ಷಗಳಿಂದ ದೇಶದ ರಾಜಕೀಯ ವ್ಯವಸ್ಥೆಯನ್ನು ಜನ ನೋಡಿದ್ದಾರೆ. ಅಭಿವೃದ್ಧಿ ಹೊರತುಪಡಿಸಿ, ಧರ್ಮದ ಆಧಾರದ ಮೇಲೆ ರಾಜಕೀಯ ನಡೆಯುತ್ತಿದೆ. ನಾನು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಬಿಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಇ.ಡಿ ದಾಳಿ ನಡೆಯುತ್ತದೆ. ಆದರೆ, ಇದೆಲ್ಲದರ ಮಧ್ಯೆ ನಾನು ಸೇವೆ ಮುಂದುವರಿಸಿದ್ದೇನೆ. ನಾನು ರಾಜಕೀಯಕ್ಕೆ ಬಂದ ತಕ್ಷಣ ಎಲ್ಲವೂ ಬದಲಾಗಲಿದೆ ಎಂದು ಹೇಳುವುದಿಲ್ಲ. ಸೇವೆಗಾಗಿ ನಾನು ರಾಜಕೀಯ ಪ್ರವೇಶಿಸಲು ಬಯಸುತ್ತೇನೆ” ಎಂದು ಹೇಳಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

13 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

14 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

14 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

14 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

14 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

15 hours ago