Featured

ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ  -vishwanews24

ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ

ನವದೆಹಲಿ: ದೇಶದ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆಯು  ಕೊನೆಯ ಹಂತಕ್ಕೆ ಬಂದಿದೆ. ಈಗಾಗಲೇ ಐದು ಹಂತದ ಮತದಾನ ಮುಕ್ತಾಯಗೊಂಡಿದ್ದು, ಇನ್ನೂ ಎರಡು ಹಂತದ ಮತದಾನ ಬಾಕಿ ಇದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆಯೇ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್‌ ವಾದ್ರಾ  ಅವರು ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, “ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ  ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ” ಎಂದಿದ್ದಾರೆ.

ಎಎನ್‌ಐ ಜತೆ ಮಾತನಾಡುವಾಗ, ನೀವು ರಾಜಕೀಯ ಪ್ರವೇಶಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. “ನಾನು ದೇಶದ ಸೇವೆ ಮಾಡುತ್ತಿದ್ದೇನೆ. ನಾನು ರಾಜಕೀಯ ಪ್ರವೇಶಿಸುವುದಿದ್ದರೆ, ನನ್ನ ಸಮಾಜ ಸೇವೆ, ನನ್ನ ಕೆಲಸ ಹಾಗೂ ನನ್ನ ಹೆಸರು ಬಳಸಿ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿಕೊಂಡು ನಾನು ರಾಜಕೀಯ ಪ್ರವೇಶಿಸುವುದಿಲ್ಲ. ಹೀಗೆ ಹೇಳಿದ ಮಾತ್ರಕ್ಕೆ ನಾನು ಗಾಂಧಿ ಕುಟುಂಬದ ಸದಸ್ಯ ಅಲ್ಲ ಎಂಬ ಅರ್ಥವಲ್ಲ. ಆದರೆ, ನನ್ನ ಹೆಸರು ಬಳಸಿಯೇ ನಾನು ರಾಜಕೀಯ ಪ್ರವೇಶಿಸುತ್ತೇನೆ” ಎಂದು ಹೇಳಿದರು.

“ರಾಜಕೀಯದಲ್ಲಿ ಬದಲಾವಣೆಯಾಗಬೇಕಿದೆ. ನಾನು ರೈತರು, ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೌದು, ಸೋನಿಯಾ ಗಾಂಧಿ ಸೇರಿ ಗಾಂಧಿ ಕುಟುಂಬದ ಹೆಸರು ಬಳಸಿದರೆ, ಅವರಿಂದ ಸಲಹೆ ಪಡೆದರೆ ನನಗೆ ಅನುಕೂಲವಾಗಬಹುದು. ಆದರೆ, ನನ್ನ ಕೆಲಸದಿಂದ ನಾನು ರಾಜಕೀಯಕ್ಕೆ ಬರಲು ಇಷ್ಟಪಡುತ್ತೇನೆ. ಹಾಗಂತ, ರಾಜಕೀಯ ಪ್ರವೇಶಿಸಲು ನಾನು ಸಮಾಜ ಸೇವೆ ಮಾಡುತ್ತಿಲ್ಲ. ಸೇವೆಯು ನನಗೆ ಖುಷಿ ಕೊಡುವ ವಿಚಾರವಾಗಿದೆ” ಎಂದು ಸಂದರ್ಶನದ ವೇಳೆ ಹೇಳಿದರು.

ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಕೂಡ ರಾಬರ್ಟ್‌ ವಾದ್ರಾ ವಾಗ್ದಾಳಿ ನಡೆಸಿದರು. “ಕಳೆದ 10 ವರ್ಷಗಳಿಂದ ದೇಶದ ರಾಜಕೀಯ ವ್ಯವಸ್ಥೆಯನ್ನು ಜನ ನೋಡಿದ್ದಾರೆ. ಅಭಿವೃದ್ಧಿ ಹೊರತುಪಡಿಸಿ, ಧರ್ಮದ ಆಧಾರದ ಮೇಲೆ ರಾಜಕೀಯ ನಡೆಯುತ್ತಿದೆ. ನಾನು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಬಿಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಇ.ಡಿ ದಾಳಿ ನಡೆಯುತ್ತದೆ. ಆದರೆ, ಇದೆಲ್ಲದರ ಮಧ್ಯೆ ನಾನು ಸೇವೆ ಮುಂದುವರಿಸಿದ್ದೇನೆ. ನಾನು ರಾಜಕೀಯಕ್ಕೆ ಬಂದ ತಕ್ಷಣ ಎಲ್ಲವೂ ಬದಲಾಗಲಿದೆ ಎಂದು ಹೇಳುವುದಿಲ್ಲ. ಸೇವೆಗಾಗಿ ನಾನು ರಾಜಕೀಯ ಪ್ರವೇಶಿಸಲು ಬಯಸುತ್ತೇನೆ” ಎಂದು ಹೇಳಿದರು.

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

2 hours ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

3 hours ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

3 hours ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

3 hours ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

3 hours ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

4 hours ago