ಚಿಕ್ಕಮಗಳೂರು: ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಜಿ ಸಿಎಂ ಹೆಚ್ಡಿಕೆ ತಿರುಗೇಟು ನೀಡಿದ್ದಾರೆ.
ರಾಜ್ಯವ್ಯಾಪಿ ಪೆನ್ಡ್ರೈವ್ ಹಂಚಿದ್ದು ಡಿಕೆ ಶಿವಕುಮಾರ್ ಮತ್ತು ತಂಡ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಆರೋಪ ಮಾಡದಿದ್ದರೆ ಮಾರ್ಕೆಟ್ನಲ್ಲಿ ಸುದ್ದಿ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ತೋರಿಸುವುದಿಲ್ಲ.ಕಥಾನಾಯಕ, ನಿರ್ಮಾಪಕ, ನಿರ್ದೇಶಕ ಎಲ್ಲಾ ಎಲ್ಲಾ ಇವರೇ ಎಂದು ಕಿಡಿಕಾರಿದರು.
ಪೆನ್ ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತಿದೆ. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ. ಅಧಿಕಾರಿಗಳನ್ನು, ರಾಜಕಾರಣಿಗಳನ್ನು ಹೆದರಿಸುವುದೇ ಇವರ ಕೆಲಸ. ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ಮೇಲ್. ಚರ್ಚೆ ಮಾಡಲು ಸದನ ಇದೆ. ಎಲ್ಲವನ್ನೂ ತಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದರು.
ಅವರದ್ದೇ ಬೇರೆ ಫ್ಯಾಮಿಲಿ ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ. ಇವರು ಇವರು ಲಾಯರ್ರಾ? ಜಡ್ಜಾ? ಹೋಗಿ ವಾದ ಮಾಡಲಿ ಎಂದು ವಾಗ್ದಾಳಿ ನಡೆಸಿದರು.
ಚುನಾವಣೆ ಮುಗಿದ ಬಳಿಕ ಚಿಕ್ಕಮಗಳೂರು ಹೊರವಲಯದಲ್ಲಿರುವ ಸೆರಾಯ್ ರೆಸಾರ್ಟ್ಗೆ ಡಿಕೆ ಶಿವಕುಮಾರ್ ತಮ್ಮ ಕುಟುಂಬದ ಸದಸ್ಯರ ಜೊತೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಹಾಗೂ ಮಾಜಿ ಪರಿಷತ್ ಸದಸ್ಯೆ ಗಾಯತ್ರಿ ಶಾಂತಗೌಡ ಮತ್ತು ಜಿಲ್ಲಾ ಘಟಕದ ಪ್ರಮುಖ ಮುಖಂಡರ ಜೊತೆ ಉಪಹಾರ ಸೇವಿಸುತ್ತಾ ಚರ್ಚೆ ನಡೆಸಿದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…