ಬೆಂಗಳೂರು: ನನ್ನ ಹೇಳಿಕೆಯಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರು: ಟಿಪ್ಪು ಹೊಡೆದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆಯಬೇಕು ಎಂಬ ಹೇಳಿಕೆಗೆ ಸಚಿವ ಅಶ್ವತ್ಥ ನಾರಾಯಣ ವಿಷಾದ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಈ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗೆ ವೈಯಕ್ತಿಕವಾಗಿ ನೋವಾಗಿದ್ರೆ ವಿಷಾಧ ವ್ಯಕ್ತಪಡಿಸ್ತೇನೆ ಎಂದರು.
ಟಿಪ್ಪು ರೀತಿ ಸಿದ್ದರಾಮಯ್ಯ ಹತ್ಯೆ ಮಾಡಬೇಕು ಅನ್ನೋ ಬಗ್ಗೆ ಸ್ಪಷ್ಟನೆ ನೀಡಿದ ಅಶ್ವತ್ಥ್ ನಾರಾಯಣ್, ಮಂಡ್ಯದಲ್ಲಿ ಕಸಬಾ ಮಹಾಶಕ್ತಿ ಕೇಂದ್ರದ ಕಾರ್ಯರ್ತರ ಉದ್ದೇಶಿಸಿ ಮಾತನಾಡುವಾಗ ಮಾತನಾಡಿದೆ. ಟಿಪ್ಪು ಹೆಸರು ಉಲ್ಲೇಖ ಮಾಡಿದ್ದೆ.ಟಿಪ್ಪು ಜಯಂತಿಯನ್ನು ಕಾಂಗ್ರೆಸ್ ಮಾಡ್ತಿದೆ. ಅದನ್ನು ಖಂಡಿಸಬೇಕಿದೆ. ಈ ಬಗ್ಗೆ ಜನರಿಗೆ ನಾನು ಸ್ಪಷ್ಟವಾಗಿ ಹೇಳಿದ್ದೆ ಎಂದರು.
ಬರುವ ಚುನಾವಣೆಯಲ್ಲಿ ಜನರ ಬೆಂಬಲ ನಮ್ಮ ಪರವಾಗಿ ಪಡೆದುಕೊಳ್ಳಬೇಕು. ನಾವು ಪ್ರಜಾಪ್ರಭುತ್ವ ದಲ್ಲಿ ಇದ್ದೇವೆ, ಯುದ್ಧದ ಕಾಲದಲ್ಲಿ ಇಲ್ಲ. ಪ್ರಜಾಪ್ರಭುತ್ವದಲ್ಲಿ ನಾವು ಗೆಲ್ಲಬೇಕಿದೆ. ಆ ವಿಚಾರವಾಗಿ ಹೇಳಿದ್ದೇನೆ ಹೊರತು ಬೇರೆಯ ರೀತಿ ಅಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ವಿರೋಧ ಮಾಡ್ತಿದ್ದೇನೆ ವಿನಹ ವೈಯಕ್ತಿಕವಾಗಿ ಅಲ್ಲ. ಗೆಲುವು ಸೋಲು ಚುನಾವಣೆಯಲ್ಲಿ ಇದೆ. ಓಲೈಕೆ ಮಾಡುವ ಪಕ್ಷವನ್ನು ಸೋಲಿಸಬೇಕು. ಬಿಜೆಪಿ ಗೆಲ್ಲಿಸಬೇಕು ಅನ್ನೋದಷ್ಟೇ ನನ್ನ ಮಾತಿನ ಉದ್ದೇಶವಾಗಿತ್ತು ಎಂದರು.
ಆದರೂ, ತನ್ನ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗೆ ವಯಕ್ತಿಕ ವಾಗಿ ನೋವಾಗಿದ್ರೆ ವಿಷಾದ ವ್ಯಕ್ತಪಡಿಸ್ತೇನೆ. ಇವರ ಹಾಗೆ ಸಿಎಂಗೆ ನಾಯಿ, ಪ್ರಧಾನಿಗೆ ನರಹಂತಕ ಎಂದು ಸಂಬೋಧಿಸಿ ಜಾತಿ, ಧರ್ಮ ಆಧಾರಿತವಾಗಿ ಸಮಾಜ ಒಡೆಯುವ ಕೆಲಸ ಮಾಡಿಲ್ಲ. ಇವರ ಹಾಗೆ ವೈಯಕ್ತಿಕವಾಗಿ ವಿರೋಧ ಮಾಡಿಲ್ಲ. ಚುನಾವಣೆಯಲ್ಲಿ ಗೆಲ್ಲಬೇಕೇ ವಿನಹ ಮತ್ತೆ ಬೇರೇನೂ ಅಲ್ಲ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…