Featured

ನಮಗೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಇದ್ದುದರಿಂದಲೇ ಪಕ್ಷವನ್ನು ಬಿಟ್ಟು ಬಂದಿದ್ದೇವೆ. ಯಾವುದೇ ಕಾರಣಕ್ಕೂ ಪುನಃ ಆ ಪಕ್ಷದತ್ತ ಮುಖ ಮಾಡುವ ಪ್ರಶ್ನೆಯೇ ಇಲ್ಲ : ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ -Vishwanews24

ಬೆಂಗಳೂರು: ನಮಗೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಇದುದ್ದರಿಂದಲೇ ಪಕ್ಷವನ್ನು ಬಿಟ್ಟು ಬಂದಿದ್ದೇವೆ. ಯಾವುದೇ ಕಾರಣಕ್ಕೂ ಪುನಃ ಆ ಪಕ್ಷದತ್ತ ಮುಖ ಮಾಡುವ ಪ್ರಶ್ನೆಯೇ ಇಲ್ಲ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಅಸಮಾಧಾನ ಇದುದ್ದರಿಂದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದೆವು. ಮತ್ತೆ ಕಾಂಗ್ರೆಸ್‍ಗೆ ಹೋಗುವ ಮಾತು ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು.

ನಾವು ಸಿದ್ದರಾಮಯ್ಯನವರಿಗೆ ಅಧಿಕಾರ ಸಿಗಲಿ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಂದಿಲ್ಲ. ನ್ಯಾಯಾಲಯದ ತೀರ್ಪು ಬಂದನಂತರ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲರೂ ಒಟ್ಟಾಗಿ ಕುಳಿತು ಚರ್ಚೆ ಮಾಡಿ ನಂತರ ತೀರ್ಮಾನ ಪ್ರಕಟಿಸುತ್ತೇವೆ ಎಂದರು. ಈವರೆಗೂ ನಾವು ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ರೀತಿಯ ತೀರ್ಮಾನ ಕೈಗೊಂಡಿಲ್ಲ. ಸುಪ್ರೀಂಕೋರ್ಟ್‍ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಅಂತಿಮ ತೀರ್ಪು ಬರುವವರೆಗೂ ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಹೇಳಿದರು.

ಉಪಚುನಾವಣೆಯಲ್ಲಿ ನಮಗೆ ಬೆಂಬಲ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ , ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಸೇರಿದಂತೆ ಹಲವರನ್ನು ಕೇಳಿದ್ದೇವೆ. ನಮಗೆ ಎಲ್ಲರೂ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

1 hour ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

1 hour ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

2 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago