ಬೆಳಗಾವಿ: ಕಳೆದ 25ಕ್ಕೂ ಹೆಚ್ಚು ದಿನಗಳಿಂದ ನನ್ನ ಅಕ್ಕನಿಗೆ ಎಷ್ಟು ಚಿತ್ರಹಿಂಸೆ ಮಾಡುತ್ತಿದ್ದಾರೆ ದೇವರಿಗೆ ಗೊತ್ತು. ಡಿ.ಕೆ. ಶಿವಕುಮಾರ್ ಹೇಳಿದ ಹಾಗೆ ಆಕೆ ಮಾಡುತ್ತಿದ್ದಾಳೆ. ಅವಳನ್ನು ರಕ್ಷಿಸಿ ಎಂದು ಸಿಡಿ ಯುವತಿಯ ಮನೆಯವರು ಹೇಳಿಕೆ ನೀಡಿದ್ದಾರೆ.
ನಗದಲ್ಲಿ ಸಿಡಿ ಸಂತ್ರಸ್ತ ಯುವತಿ ತಂದೆ-ತಾಯಿ, ಸಹೋದರರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಪ್ರಕರಣ ಹೊರ ಬಂದಂತೆ ನಾವು ಆಕೆಯನ್ನು ಸಂಪರ್ಕಿಸಿದ್ದವು. ಆಕೆ ಅದೆಲ್ಲವೂ ಸುಳ್ಳು, ಗ್ರಾಫಿಕ್ಸ್ ಎಂಬುದಾಗಿಯೂ ತಿಳಿಸಿದ್ದಳು. ನಮ್ಮ ಮಗಳ ಮೇಲೆ ನಮಗೆ ನಂಬಿಕೆ ಇದೆ. ಆಕೆ ಇಂತಹ ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂಬುದಾಗಿ ಹೇಳಿದರು.
ಇದನ್ನೂ ಓದಿ : ಸಿಡಿ ಪ್ರಕರಣ : ಸಂತ್ರಸ್ತೆ ಬಂದು ದೂರು ನೀಡುವವರೆಗೂ ಯಾರನ್ನೂ ಬಂಧಿಸಲು ಆಗಲ್ಲ: ಪ್ರಹ್ಲಾದ್ ಜೋಶಿ -Vishwanews24
ನಮ್ಮ ಮಗಳಿಂದ ದಿನಕ್ಕೊಂದು ಹೇಳಿಕೆಯನ್ನು ಒತ್ತಾಯಪೂರ್ವಕವಾಗಿಯೇ ಕೊಡಿಸುತ್ತಿದ್ದಾರೆ. ಪ್ರಕರಣದ ಹಿಂದೆ ಡಿಕೆ ಶಿವಕುಮಾರ್ ಇದ್ದಾರೆ. ಅವರನ್ನು ಆಕೆ ಭೇಟಿಯಾಗಿದ್ದಾಗಿಯೂ ಹೇಳಿದ್ದಾಳೆ. ಹಣ ಕೊಟ್ಟು ಗೋವಾ ಸೇರಿದಂತೆ ಬೇರೆ ಬೇರೆ ಸ್ಥಳಗಳಿಗೆ ಕಳುಹಿಸಿ ಕೊಡಲಾಗಿದೆ. ಒತ್ತಡ, ಒತ್ತಾಯದೊಂದಿಗೆ ಆಕೆ ಹೀಗೆಲ್ಲಾ ಹೇಳಿಕೆ ನೀಡುತ್ತಿದ್ದಾಳೆ. ಆಕೆಯನ್ನು ನಾವು ಮಾತನಾಡಿಸೋದು ಬಿಟ್ಟಿಲ್ಲ. ಆಕೆ ನಮ್ಮ ಜೊತೆಗೆ ಇರಲು ಬಯಸಿದ್ರೇ ಬರಲಿ ಎಂದರು.
ಆಕೆ 25 ದಿನಗಳಿಂದ ಯಾವ ರೀತಿ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯದ ಸಿಎಂ, ನ್ಯಾಯಾಧೀಶರು, ಗೃಹ ಸಚಿವರು ಪರಿಗಣಿಸಬೇಕು. ಆಕೆಗೆ 3-4 ದಿನಗಳ ಕಾಲ ಸಮಯ ನೀಡಬೇಕು. ಕೌನ್ಸಲಿಂಗ್ ಮಾಡಿಸಬೇಕು ಎಂದರು.
ಡಿ ಕೆ ಶಿವಕುಮಾರ್ ಮತ್ತು ಸಿಡಿ ಗುಂಪು ಷಡ್ಯಂತ್ರ ನಡೆಸುತ್ತಿದೆ. ಡಿಕೆಶಿಯವರ ಕಡೆಯಿಂದ ನಮ್ಮ ಮಗಳನ್ನು ರಕ್ಷಿಸಿ ಎಂದು ಯುವತಿ ಪೋಷಕರು ನೇರ ಆರೋಪ ಮಾಡಿದರು.
ನಾನು ನಿವೃತ್ತ ಸೈನಿಕನಿದ್ದೇನೆ. ನನ್ನ ಮಗಳಿಗೆ ನಾನು ಭದ್ರತೆ ನೀಡುತ್ತೇನೆ. ಅವಳು ಇಲ್ಲಿದೆ ಬರಲಿ ಎಂದು ಯುವತಿಯ ತಂದೆ ಹೇಳಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…