Featured

ನಮಗೆ 5 ಎಕರೆ ಭೂಮಿ ಅಗತ್ಯವಿಲ್ಲ , ಅಯೋಧ್ಯೆಯ ತೀರ್ಪು ತೃಪ್ತಿ ತಂದಿಲ್ಲ : ಅಸದುದ್ದೀನ್ ಒವೈಸಿ -Vishwanews24

ನವದೆಹಲಿ: ರಾಮ್ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಲ್ಲಿ ತೃಪ್ತಿ ಇಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸದುದ್ದೀನ್ ಒವೈಸಿ ಹೇಳಿದ್ದಾರೆ.

‘ಸುಪ್ರೀಂ ಕೋರ್ಟ್ ನಿಜಕ್ಕೂ ಸರ್ವೋಚ್ಚ, ಆದರೆ ದೋಷ ರಹಿತವೇನಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. “ನಾನು ತೀರ್ಪಿನಿಂದ ತೃಪ್ತಿ ಹೊಂದಿಲ್ಲ. ಸುಪ್ರೀಂ ಕೋರ್ಟ್ ನಿಜಕ್ಕೂ ಸರ್ವೋಚ್ಚ ಆದರೆ ದೋಷರಹಿತವಲ್ಲ. ನಮಗೆ ಸಂವಿಧಾನದ ಬಗ್ಗೆ ಸಂಪೂರ್ಣ ನಂಬಿಕೆ ಇದೆ. ನಮ್ಮ ಕಾನೂನು ಹಕ್ಕುಗಳಿಗಾಗಿ ನಾವು ಹೋರಾಡುತ್ತಿದ್ದೆವು. ನಮಗೆ ಐದು ಎಕರೆ ಜಮೀನು ದೇಣಿಗೆಯಾಗಿ ಅಗತ್ಯವಿಲ್ಲ” ಎಂದು  ಓವೈಸಿ ಹೇಳಿದರು.

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಕುರಿತು ಪ್ರತಿಕ್ರಿಯಿಸಿದ ಓವೈಸಿ, ‘ನಾವು ನಮ್ಮ ಕಾನೂನುಬದ್ಧ ಹಕ್ಕಿಗಾಗಿ ಹೋರಾಡುತ್ತಿದ್ದೆವು. ನನ್ನ ಅಭಿಪ್ರಾಯದಲ್ಲಿ, ಈ ಐದು ಎಕರೆ ಭೂ ಪ್ರಸ್ತಾಪವನ್ನು ನಾವು ತಿರಸ್ಕರಿಸಬೇಕು. ನಮ್ಮನ್ನು ಉತ್ತೇಜಿತಗೋಳಿಸಬೇಡಿ’ ಎಂದರು. ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಭೂಮಿಯನ್ನು ನೀಡುವಂತೆ ಸುಪ್ರೀಂ ಕೋರ್ಟ್ ಇಂದು ಕೇಂದ್ರಕ್ಕೆ ನಿರ್ದೇಶನ ನೀಡಿದೆ ಮತ್ತು ಅದೇ ಸಮಯದಲ್ಲಿ ಟ್ರಸ್ಟ್ ರಚಿಸುವ ಮೂಲಕ ಸ್ಥಳದಲ್ಲಿ ದೇವಾಲಯ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿ ಎಂದು ಸೂಚಿಸಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

6 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

6 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

6 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

10 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

10 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

10 hours ago