Featured

ನಮಗೆ 5 ಎಕರೆ ಭೂಮಿ ಅಗತ್ಯವಿಲ್ಲ , ಅಯೋಧ್ಯೆಯ ತೀರ್ಪು ತೃಪ್ತಿ ತಂದಿಲ್ಲ : ಅಸದುದ್ದೀನ್ ಒವೈಸಿ -Vishwanews24

ನವದೆಹಲಿ: ರಾಮ್ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಲ್ಲಿ ತೃಪ್ತಿ ಇಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸದುದ್ದೀನ್ ಒವೈಸಿ ಹೇಳಿದ್ದಾರೆ.

‘ಸುಪ್ರೀಂ ಕೋರ್ಟ್ ನಿಜಕ್ಕೂ ಸರ್ವೋಚ್ಚ, ಆದರೆ ದೋಷ ರಹಿತವೇನಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. “ನಾನು ತೀರ್ಪಿನಿಂದ ತೃಪ್ತಿ ಹೊಂದಿಲ್ಲ. ಸುಪ್ರೀಂ ಕೋರ್ಟ್ ನಿಜಕ್ಕೂ ಸರ್ವೋಚ್ಚ ಆದರೆ ದೋಷರಹಿತವಲ್ಲ. ನಮಗೆ ಸಂವಿಧಾನದ ಬಗ್ಗೆ ಸಂಪೂರ್ಣ ನಂಬಿಕೆ ಇದೆ. ನಮ್ಮ ಕಾನೂನು ಹಕ್ಕುಗಳಿಗಾಗಿ ನಾವು ಹೋರಾಡುತ್ತಿದ್ದೆವು. ನಮಗೆ ಐದು ಎಕರೆ ಜಮೀನು ದೇಣಿಗೆಯಾಗಿ ಅಗತ್ಯವಿಲ್ಲ” ಎಂದು  ಓವೈಸಿ ಹೇಳಿದರು.

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಕುರಿತು ಪ್ರತಿಕ್ರಿಯಿಸಿದ ಓವೈಸಿ, ‘ನಾವು ನಮ್ಮ ಕಾನೂನುಬದ್ಧ ಹಕ್ಕಿಗಾಗಿ ಹೋರಾಡುತ್ತಿದ್ದೆವು. ನನ್ನ ಅಭಿಪ್ರಾಯದಲ್ಲಿ, ಈ ಐದು ಎಕರೆ ಭೂ ಪ್ರಸ್ತಾಪವನ್ನು ನಾವು ತಿರಸ್ಕರಿಸಬೇಕು. ನಮ್ಮನ್ನು ಉತ್ತೇಜಿತಗೋಳಿಸಬೇಡಿ’ ಎಂದರು. ಸುನ್ನಿ ವಕ್ಫ್ ಮಂಡಳಿಗೆ ಐದು ಎಕರೆ ಭೂಮಿಯನ್ನು ನೀಡುವಂತೆ ಸುಪ್ರೀಂ ಕೋರ್ಟ್ ಇಂದು ಕೇಂದ್ರಕ್ಕೆ ನಿರ್ದೇಶನ ನೀಡಿದೆ ಮತ್ತು ಅದೇ ಸಮಯದಲ್ಲಿ ಟ್ರಸ್ಟ್ ರಚಿಸುವ ಮೂಲಕ ಸ್ಥಳದಲ್ಲಿ ದೇವಾಲಯ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿ ಎಂದು ಸೂಚಿಸಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

12 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

12 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

12 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

12 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

13 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

13 hours ago