ನವದೆಹಲಿ:: ಬಾಬರಿ ಮಸ್ಜಿದ್ ಮತ್ತು ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ 1994ರಲ್ಲಿ ಕೆಳಹಂತದ ನ್ಯಾಯಾಲಯವು ನೀಡಿದ್ದ ಆದೇಶವನ್ನು ಇಂದು ಸುಪ್ರೀಮ್ ಕೋರ್ಟ್ ಎತ್ತಿ ಹಿಡಿದಿದೆ, ಮುಸ್ಲಿಮ್ ಧರ್ಮಿಯರಿಗೆ ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂಬ ಆದೇಶವನ್ನು ಸುಪ್ರೀಮ್ ಕೋರ್ಟ್ ಎತ್ತಿ ಹಿಡಿದಿದೆ. ಇನ್ನು ಈ ಪ್ರಕರಣವನ್ನು ವಿಸ್ತೃತ ನ್ಯಾಯಾಲಯ ಪೀಠಕ್ಕೆ ವರ್ಗಾಯಿಸುವ ಅಗತ್ಯ ಇಲ್ಲವೆಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ಇಂದು ತೀರ್ಪು ನೀಡಿದೆ.
ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂದು 1994ರ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಡಿದೆ. ಜೊತೆಗೆ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ತೀರ್ಮಾನಿಸಿದೆ. ಅಕ್ಟೋಬರ್ 29ರಂದು ರಾಮ ಜನ್ಮಭೂಮಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ. ನ್ಯಾ. ದೀಪಕ್ ಮಿಶ್ರಾ ಹಾಗೂ ಜಸ್ಟೀಸ್ ಅಶೋಕ್ ಭೂಷಣ್ನ್ಯಾ ಅವರು ವಿಸ್ತೃತ ಪೀಠಕ್ಕೆ ಕೇಸ್ ವರ್ಗಾವಣೆ ಬೇಡ ಎಂದರೆ,ನ್ಯಾ ಅಬ್ದುಲ್ ನಜೀರ್ ಅವರು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಬಗ್ಗೆ ಒಲವು ತೋರಿದ್ದರು.
ಏನಿದು ಪ್ರಕರಣ?
ಇಸ್ಮಾಯಿಲ್ ಫರೂಕಿ ವರ್ಸಸ್ ಭಾರತ ಸರಕಾರದ ನಡುವಿನ ಪ್ರಕರಣದ ವಿಚಾರಣೆ ವೇಳೆ 1994ರಲ್ಲಿ ಸುಪ್ರೀಂ ಕೋರ್ಟ್, ನಮಾಜ್ ಎಲ್ಲಿ ಬೇಕಾದರೂ ಸಲ್ಲಿಸಬಹುದು. ಮಸೀದಿಯೇ ಆಗಬೇಕೆಂದಿಲ್ಲ. ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಲ್ಲ. ಈ ಕಾರಣಕ್ಕೆ ಮಸೀದಿ ನಿರ್ಮಿಸಿರುವ ಜಾಗವನ್ನು ಸರ್ಕಾರ ವಶಪಡಿಸಿಕೊಳ್ಳಬಹುದು ಎಂದು ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಮೇಲ್ಮನವಿ ಸಲ್ಲಿಸಿದ್ದವು. ಅಷ್ಟೇ ಅಲ್ಲದೇ ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ ಎಂದಿದ್ದ ಇಸ್ಮಾಯಿಲ್ ಫಾರೂಕಿ ತೀರ್ಪನ್ನು ಪರಿಶೀಲನೆಗಾಗಿ ದೊಡ್ಡ ಸಂವಿಧಾನಿಕ ಪೀಠಕ್ಕೆ ಹಸ್ತಾಂತರಿಸಬೇಕು ಎಂದು ಅರ್ಜಿ ಸಲ್ಲಿಕೆಯಾಗಿತ್ತು.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…