ನವದೆಹಲಿ:: ಬಾಬರಿ ಮಸ್ಜಿದ್ ಮತ್ತು ರಾಮಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ 1994ರಲ್ಲಿ ಕೆಳಹಂತದ ನ್ಯಾಯಾಲಯವು ನೀಡಿದ್ದ ಆದೇಶವನ್ನು ಇಂದು ಸುಪ್ರೀಮ್ ಕೋರ್ಟ್ ಎತ್ತಿ ಹಿಡಿದಿದೆ, ಮುಸ್ಲಿಮ್ ಧರ್ಮಿಯರಿಗೆ ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂಬ ಆದೇಶವನ್ನು ಸುಪ್ರೀಮ್ ಕೋರ್ಟ್ ಎತ್ತಿ ಹಿಡಿದಿದೆ. ಇನ್ನು ಈ ಪ್ರಕರಣವನ್ನು ವಿಸ್ತೃತ ನ್ಯಾಯಾಲಯ ಪೀಠಕ್ಕೆ ವರ್ಗಾಯಿಸುವ ಅಗತ್ಯ ಇಲ್ಲವೆಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ಇಂದು ತೀರ್ಪು ನೀಡಿದೆ.
ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂದು 1994ರ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಡಿದೆ. ಜೊತೆಗೆ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ತೀರ್ಮಾನಿಸಿದೆ. ಅಕ್ಟೋಬರ್ 29ರಂದು ರಾಮ ಜನ್ಮಭೂಮಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ. ನ್ಯಾ. ದೀಪಕ್ ಮಿಶ್ರಾ ಹಾಗೂ ಜಸ್ಟೀಸ್ ಅಶೋಕ್ ಭೂಷಣ್ನ್ಯಾ ಅವರು ವಿಸ್ತೃತ ಪೀಠಕ್ಕೆ ಕೇಸ್ ವರ್ಗಾವಣೆ ಬೇಡ ಎಂದರೆ,ನ್ಯಾ ಅಬ್ದುಲ್ ನಜೀರ್ ಅವರು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಬಗ್ಗೆ ಒಲವು ತೋರಿದ್ದರು.
ಏನಿದು ಪ್ರಕರಣ?
ಇಸ್ಮಾಯಿಲ್ ಫರೂಕಿ ವರ್ಸಸ್ ಭಾರತ ಸರಕಾರದ ನಡುವಿನ ಪ್ರಕರಣದ ವಿಚಾರಣೆ ವೇಳೆ 1994ರಲ್ಲಿ ಸುಪ್ರೀಂ ಕೋರ್ಟ್, ನಮಾಜ್ ಎಲ್ಲಿ ಬೇಕಾದರೂ ಸಲ್ಲಿಸಬಹುದು. ಮಸೀದಿಯೇ ಆಗಬೇಕೆಂದಿಲ್ಲ. ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಲ್ಲ. ಈ ಕಾರಣಕ್ಕೆ ಮಸೀದಿ ನಿರ್ಮಿಸಿರುವ ಜಾಗವನ್ನು ಸರ್ಕಾರ ವಶಪಡಿಸಿಕೊಳ್ಳಬಹುದು ಎಂದು ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಮೇಲ್ಮನವಿ ಸಲ್ಲಿಸಿದ್ದವು. ಅಷ್ಟೇ ಅಲ್ಲದೇ ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ ಎಂದಿದ್ದ ಇಸ್ಮಾಯಿಲ್ ಫಾರೂಕಿ ತೀರ್ಪನ್ನು ಪರಿಶೀಲನೆಗಾಗಿ ದೊಡ್ಡ ಸಂವಿಧಾನಿಕ ಪೀಠಕ್ಕೆ ಹಸ್ತಾಂತರಿಸಬೇಕು ಎಂದು ಅರ್ಜಿ ಸಲ್ಲಿಕೆಯಾಗಿತ್ತು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …