ಉಡುಪಿ: ನಮೋ ಅಂದರೆ ನಮಗೆ ಮೋಸವಲ್ಲ, ದೇಶಾದ್ಯಂತ ಸಾಮಾನ್ಯ ಜನರ ಪಾಲಿಗೆ ನಮೋ ಅಂದರೆ ನಮಗೆ ಮೋದಕ ಎನ್ನುವ ಮೂಲಕ ಸಚಿವ ಪ್ರಮೋದ್ ಮಧ್ವರಾಜ್ ಅವರ “ಮೋದಿ ಅಂದರೆ ನಮಗೆ ಮೋಸ” ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ತಿರುಗೇಟು ನೀಡಿದ್ದಾರೆ.
ಕಳೆದ ಮೂರು ದಿನಗಳ ಹಿಂದಷ್ಟೆ ನಡೆದ ಕಾಂಗ್ರೆಸ್ ಸಭೆಯಲ್ಲಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿ, ಮೋದಿ ಅಂದರೆ ನಮಗೆ ಮೋಸ ಎಂದು ಹೇಳಿಕೆ ನೀಡಿದ್ದರು.
ಸಚಿವ ಮಧ್ವರಾಜ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೋಟ ಶ್ರೀನಿವಾಸ ಪೂಜಾರಿ, ನಮೋ ಅಂದರೆ ಕಾಂಗ್ರೆಸ್ ಪಾಲಿಗೆ ಮೋಸ ಎಂದು ಅನ್ನಿಸಬಹುದು. ಆದರೆ ದೇಶಾದಾದ್ಯಂತ ಸಾಮಾನ್ಯ ಜನರ ಪಾಲಿಗೆ ಇದು ಮೋದಕವಾಗಿದೆ ಎಂದಿದ್ದಾರೆ.
ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ಬಳಿಕ ಭಾರತ ದೇಶದಾದ್ಯಂತ ಅಭಿವೃದ್ದಿ ಮತ್ತು ರಾಷ್ಟ್ರೀಯತೆಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು ದೇಶದ ಜನಸಾಮಾನ್ಯರು ಸಂತೃಪ್ತರಾಗುತ್ತಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮೋ ಶಕ್ತಿ ಏನು ಎಂಬುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಚೆನ್ನಾಗಿಯೇ ತಿಳಿಯಲಿದೆ ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…