ಉಡುಪಿ: ನಮೋ ಅಂದರೆ ನಮಗೆ ಮೋಸವಲ್ಲ, ದೇಶಾದ್ಯಂತ ಸಾಮಾನ್ಯ ಜನರ ಪಾಲಿಗೆ ನಮೋ ಅಂದರೆ ನಮಗೆ ಮೋದಕ ಎನ್ನುವ ಮೂಲಕ ಸಚಿವ ಪ್ರಮೋದ್ ಮಧ್ವರಾಜ್ ಅವರ “ಮೋದಿ ಅಂದರೆ ನಮಗೆ ಮೋಸ” ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ತಿರುಗೇಟು ನೀಡಿದ್ದಾರೆ.
ಕಳೆದ ಮೂರು ದಿನಗಳ ಹಿಂದಷ್ಟೆ ನಡೆದ ಕಾಂಗ್ರೆಸ್ ಸಭೆಯಲ್ಲಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿ, ಮೋದಿ ಅಂದರೆ ನಮಗೆ ಮೋಸ ಎಂದು ಹೇಳಿಕೆ ನೀಡಿದ್ದರು.
ಸಚಿವ ಮಧ್ವರಾಜ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೋಟ ಶ್ರೀನಿವಾಸ ಪೂಜಾರಿ, ನಮೋ ಅಂದರೆ ಕಾಂಗ್ರೆಸ್ ಪಾಲಿಗೆ ಮೋಸ ಎಂದು ಅನ್ನಿಸಬಹುದು. ಆದರೆ ದೇಶಾದಾದ್ಯಂತ ಸಾಮಾನ್ಯ ಜನರ ಪಾಲಿಗೆ ಇದು ಮೋದಕವಾಗಿದೆ ಎಂದಿದ್ದಾರೆ.
ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ಬಳಿಕ ಭಾರತ ದೇಶದಾದ್ಯಂತ ಅಭಿವೃದ್ದಿ ಮತ್ತು ರಾಷ್ಟ್ರೀಯತೆಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು ದೇಶದ ಜನಸಾಮಾನ್ಯರು ಸಂತೃಪ್ತರಾಗುತ್ತಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮೋ ಶಕ್ತಿ ಏನು ಎಂಬುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಚೆನ್ನಾಗಿಯೇ ತಿಳಿಯಲಿದೆ ಎಂದಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…