Featured

ನಮ್ಮದು ಎಲ್ಲರನ್ನೊಳಗೊಂಡ ವೈವಿಧ್ಯಮಯ ಆಡಳಿತವಾಗಲಿದೆ : ಅಮೆರಿಕ ಅಧ್ಯಕ್ಷ ಜೋ ಬೈಡನ್ -Vishwanews24

ನಮ್ಮದು ಎಲ್ಲರನ್ನೊಳಗೊಂಡ ವೈವಿಧ್ಯಮಯ ಆಡಳಿತವಾಗಲಿದೆ : ಅಮೆರಿಕ ಅಧ್ಯಕ್ಷ ಜೋ ಬೈಡನ್ -Vishwanews24

ವಾಷಿಂಗ್ಟನ್‌: ‘ನಮ್ಮ ಸರ್ಕಾರದಲ್ಲಿ ಸಚಿವ ಸಂಪುಟ, ಶ್ವೇತಭವನದ ಕಚೇರಿ ಸೇರಿದಂತೆ ಆಡಳಿತದ ಎಲ್ಲ ವಿಭಾಗದಲ್ಲೂ ಹಿಂದೆಂದೂ ಕಾಣದ ವೈವಿಧ್ಯವನ್ನು ನೋಡಬಹುದು’ ಎಂದು ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್ ಹೇಳಿದ್ದಾರೆ.

ಇತ್ತೀಚೆಗೆ ಆಫ್ರಿಕನ್‌– ಅಮೆರಿಕನ್ ಸಮುದಾಯದವರು ಸೇರಿದಂತೆ, ಕೆಲವು ಗುಂಪುಗಳು, ‘ಹೊಸ ಆಡಳಿತದಲ್ಲಿ ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ’ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ, ಬೈಡನ್ ಅವರು ‘ನಮ್ಮದು ಎಲ್ಲರನ್ನೊಳಗೊಂಡ ವೈವಿಧ್ಯಮಯ ಆಡಳಿತವಾಗಲಿದೆ‘ ಎಂದು ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವರು ಹೊಸ ಸರ್ಕಾರದಲ್ಲಿ ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ ಎಂದು ಒತ್ತಾಯಿಸುತ್ತಿದ್ದಾರೆ. ನಾನು ಹೇಳುವುದು ಇಷ್ಟೆ; ಒಮ್ಮೆ ಹೊಸ ಆಡಳಿತದ ಎಲ್ಲ ಚಟುವಟಿಕೆಗಳೂ ಪೂರ್ಣಗೊಳ್ಳಲಿ. ಆ ನಂತರ ನಮ್ಮ ಆಡಳಿತ ಎಷ್ಟು ವೈವಿಧ್ಯಮಯವಾಗಿದೆ ಎಂಬುದು ಗೊತ್ತಾಗುತ್ತದೆ‘ ಎಂದು ಹೇಳಿದ್ದಾರೆ.

‘ನಮ್ಮ ಆಡಳಿತದಲ್ಲಿ ಎಲ್ಲ ವರ್ಗದವರೂ ಇರುತ್ತಾರೆ. ಆದರೆ, ಯಾವ ಇಲಾಖೆಯಲ್ಲಿ ಏನು ಮಾಡುತ್ತೇನೆಂದು ಈಗ ನಿಖರವಾಗಿ ಹೇಳಲು ಆಗುವುದಿಲ್ಲ. ನಮ್ಮ ಆಡಳಿತದಲ್ಲಿ ಅಮೆರಿಕದಲ್ಲಿರುವ ಲಿಂಗ, ವರ್ಣ, ಸಮುದಾಯ ಆಧಾರಿತವಾಗಿ ಎಲ್ಲರಿಗೂ ಪ್ರಾತಿನಿಧ್ಯ ಸಿಗಲಿದೆ ಎಂದು ಭರವಸೆ ನೀಡುತ್ತೇನೆ‘ ಎಂದು ಜೋ ಬೈಡನ್ ಹೇಳಿದರು.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

10 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

15 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

15 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

16 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

16 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

16 hours ago