Featured

ನಮ್ಮದು ಶಾಂತಿಪ್ರಿಯ ರಾಜ್ಯ , ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ: ಡಿ.ಕೆ. ಶಿವಕುಮಾರ್  – vishwanews24

ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು : “ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಅವರು, “ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯಕ್ಕೆ ಅಗೌರವ ತೋರಿದವರ, ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಬಿಜೆಪಿಯವರಿಗೆ 7 ತಿಂಗಳ ಕಾಲ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಹೀಗೆ ಮಾತನಾಡುತ್ತಿದ್ದಾರೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಹಾಗೂ ಜನ ಇದಕ್ಕೆ ಉತ್ತರ ನೀಡುತ್ತೇವೆ. ನಾವು ಅವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅನ್ಯ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ. ಬಿಜೆಪಿ ಸರ್ಕಾರ ಇದ್ದಾಗ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಎಷ್ಟು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದೆ ಎಂಬುದನ್ನು ನೋಡಿ. ನಾವು ಇದುವರೆಗೂ ಆ ರೀತಿ ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳಿದರು.

ಪೊಲೀಸ್ ಠಾಣೆ ಮುತ್ತಿಗೆ ಹಾಕಲು ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಅವರು ಹೋಗಿ ಕಟ್ಟಿ ಹಾಕಿಕೊಳ್ಳಲಿ. ಅವರ ಸರ್ಕಾರದಲ್ಲಿ ಏನೆಲ್ಲಾ ಮಾಡಿದ್ದರು ಎಂದು ನೋಡಿಕೊಳ್ಳಲಿ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಮವಸ್ತ್ರ ಬದಲು ಕೇಸರಿ ಬಟ್ಟೆ ಹಾಕಿಸಿದರು. ಅಂತಹ ಕೆಲಸ ನಾವು ಮಾಡಿಲ್ಲ” ಎಂದು ತಿರುಗೇಟು ನೀಡಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

50 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

56 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago