ಬೆಂಗಳೂರು: ‘ನಮ್ಮದು ಹೇಡಿ ಸರ್ಕಾರವಲ್ಲ, ರಾಜಾ ಹುಲಿ ಸರ್ಕಾರ. ಪಿಎಫ್ಐ, ಎಸ್ಡಿಪಿಐ ಸಂಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ’ ಎಂದು ಸರ್ಕಾರದ ಮುಖ್ಯ ಸಚೇತಕ ಸುನಿಲ್ ಕುಮಾರ್ ಹೇಳಿದರು.
ವಿಧಾನಸಭೆಯಲ್ಲಿ ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮಾತನಾಡಿದ ಅವರು, ವಿರೋಧ ಪಕ್ಷಗಳು ಈ ಸಂಘಟನೆಗಳ ಪರವಾಗಿ ಮಾತನಾಡುವ ಮೂಲಕ ಪೊಲೀಸರ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
‘ಪ್ರಕರಣದ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ಮುಗಿಯುವ ಮೊದಲೇ ವಿರೋಧ ಪಕ್ಷದವರು ಗಲಭೆಕೋರರಿಗೆ ಅಮಾಯಕರು ಎಂಬ ಪ್ರಮಾಣ ಪತ್ರವನ್ನು ನೀಡಿದ್ದಾರೆ. ಗಲಭೆ ಹಿಂದಿನ ಶಕ್ತಿಗಳು ಸೌದಿ ಅರೇಬಿಯಾದಲ್ಲಿದ್ದು, ಅವರು ನಮಗೆ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಈ ರೀತಿ ಬೆದರಿಕೆ ಹಾಕುತ್ತಿರುವವರು ಯಾರು? ಇವರನ್ನು ನೀವು ಏಕೆ ಸಮರ್ಥಿಸುತ್ತೀರಿ’ ಎಂದು ಸುನಿಲ್ ಪ್ರಶ್ನಿಸಿದರು.
‘ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎರಡು– ಮೂರು ಸಂಘಟನೆಗಳು ಅಶಾಂತಿಯ ವಾತಾವರಣ ಸೃಷ್ಟಿಸಿವೆ.ಡಿ.17 ರಂದು ಕಾಂಗ್ರೆಸ್ ಶಾಸಕ ಖಾದರ್ ಅವರು ಸಿಎಎ ಜಾರಿ ಮಾಡಿದರೆ ದೇಶ ಹೊತ್ತಿ ಉರಿಯುತ್ತದೆ ಎಂದು ಹೇಳಿಕೆ ನೀಡಿದ್ದೇ ಡಿ.19ರ ಗಲಭೆಗೆ ಪ್ರಚೋದನೆ ಆಯಿತು. ಆ ಗಲಭೆಗೆ ಪಿಎಫ್ಐ ಮತ್ತು ಎಸ್ಡಿಪಿಐ ಕಾರಣವಾಗಿವೆ’ ಎಂದರು.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…