ಬೆಂಗಳೂರು: ‘ನಮ್ಮದು ಹೇಡಿ ಸರ್ಕಾರವಲ್ಲ, ರಾಜಾ ಹುಲಿ ಸರ್ಕಾರ. ಪಿಎಫ್ಐ, ಎಸ್ಡಿಪಿಐ ಸಂಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ’ ಎಂದು ಸರ್ಕಾರದ ಮುಖ್ಯ ಸಚೇತಕ ಸುನಿಲ್ ಕುಮಾರ್ ಹೇಳಿದರು.
ವಿಧಾನಸಭೆಯಲ್ಲಿ ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮಾತನಾಡಿದ ಅವರು, ವಿರೋಧ ಪಕ್ಷಗಳು ಈ ಸಂಘಟನೆಗಳ ಪರವಾಗಿ ಮಾತನಾಡುವ ಮೂಲಕ ಪೊಲೀಸರ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
‘ಪ್ರಕರಣದ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ಮುಗಿಯುವ ಮೊದಲೇ ವಿರೋಧ ಪಕ್ಷದವರು ಗಲಭೆಕೋರರಿಗೆ ಅಮಾಯಕರು ಎಂಬ ಪ್ರಮಾಣ ಪತ್ರವನ್ನು ನೀಡಿದ್ದಾರೆ. ಗಲಭೆ ಹಿಂದಿನ ಶಕ್ತಿಗಳು ಸೌದಿ ಅರೇಬಿಯಾದಲ್ಲಿದ್ದು, ಅವರು ನಮಗೆ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಈ ರೀತಿ ಬೆದರಿಕೆ ಹಾಕುತ್ತಿರುವವರು ಯಾರು? ಇವರನ್ನು ನೀವು ಏಕೆ ಸಮರ್ಥಿಸುತ್ತೀರಿ’ ಎಂದು ಸುನಿಲ್ ಪ್ರಶ್ನಿಸಿದರು.
‘ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎರಡು– ಮೂರು ಸಂಘಟನೆಗಳು ಅಶಾಂತಿಯ ವಾತಾವರಣ ಸೃಷ್ಟಿಸಿವೆ.ಡಿ.17 ರಂದು ಕಾಂಗ್ರೆಸ್ ಶಾಸಕ ಖಾದರ್ ಅವರು ಸಿಎಎ ಜಾರಿ ಮಾಡಿದರೆ ದೇಶ ಹೊತ್ತಿ ಉರಿಯುತ್ತದೆ ಎಂದು ಹೇಳಿಕೆ ನೀಡಿದ್ದೇ ಡಿ.19ರ ಗಲಭೆಗೆ ಪ್ರಚೋದನೆ ಆಯಿತು. ಆ ಗಲಭೆಗೆ ಪಿಎಫ್ಐ ಮತ್ತು ಎಸ್ಡಿಪಿಐ ಕಾರಣವಾಗಿವೆ’ ಎಂದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…