ನಮ್ಮದು ಹೇಡಿ ಸರ್ಕಾರವಲ್ಲ, ರಾಜಾ ಹುಲಿ ಸರ್ಕಾರ : ಸುನಿಲ್‌ ಕುಮಾರ್‌ -Vishwanews24

ಬೆಂಗಳೂರು: ‘ನಮ್ಮದು ಹೇಡಿ ಸರ್ಕಾರವಲ್ಲ, ರಾಜಾ ಹುಲಿ ಸರ್ಕಾರ. ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ’ ಎಂದು ಸರ್ಕಾರದ ಮುಖ್ಯ ಸಚೇತಕ ಸುನಿಲ್‌ ಕುಮಾರ್‌ ಹೇಳಿದರು.

ವಿಧಾನಸಭೆಯಲ್ಲಿ ಮಂಗಳೂರು ಗೋಲಿಬಾರ್‌ ಪ್ರಕರಣದ ಕುರಿತು ಮಾತನಾಡಿದ ಅವರು, ವಿರೋಧ ಪಕ್ಷಗಳು ಈ ಸಂಘಟನೆಗಳ ಪರವಾಗಿ ಮಾತನಾಡುವ ಮೂಲಕ ಪೊಲೀಸರ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

‘ಪ್ರಕರಣದ ಬಗ್ಗೆ ಮ್ಯಾಜಿಸ್ಟ್ರೇಟ್‌ ತನಿಖೆ ಮುಗಿಯುವ ಮೊದಲೇ ವಿರೋಧ ಪಕ್ಷದವರು ಗಲಭೆಕೋರರಿಗೆ ಅಮಾಯಕರು ಎಂಬ ಪ್ರಮಾಣ ಪತ್ರವನ್ನು ನೀಡಿದ್ದಾರೆ. ಗಲಭೆ ಹಿಂದಿನ ಶಕ್ತಿಗಳು ಸೌದಿ ಅರೇಬಿಯಾದಲ್ಲಿದ್ದು, ಅವರು ನಮಗೆ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಈ ರೀತಿ ಬೆದರಿಕೆ ಹಾಕುತ್ತಿರುವವರು ಯಾರು? ಇವರನ್ನು ನೀವು ಏಕೆ ಸಮರ್ಥಿಸುತ್ತೀರಿ’ ಎಂದು ಸುನಿಲ್‌ ಪ್ರಶ್ನಿಸಿದರು.

‘ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎರಡು– ಮೂರು ಸಂಘಟನೆಗಳು ಅಶಾಂತಿಯ ವಾತಾವರಣ ಸೃಷ್ಟಿಸಿವೆ.ಡಿ.17 ರಂದು ಕಾಂಗ್ರೆಸ್‌ ಶಾಸಕ ಖಾದರ್ ಅವರು ಸಿಎಎ ಜಾರಿ ಮಾಡಿದರೆ ದೇಶ ಹೊತ್ತಿ ಉರಿಯುತ್ತದೆ ಎಂದು ಹೇಳಿಕೆ ನೀಡಿದ್ದೇ ಡಿ.19ರ ಗಲಭೆಗೆ ಪ್ರಚೋದನೆ ಆಯಿತು. ಆ ಗಲಭೆಗೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರಣವಾಗಿವೆ’ ಎಂದರು.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

3 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

3 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago