ನಮ್ಮದು ಹೇಡಿ ಸರ್ಕಾರವಲ್ಲ, ರಾಜಾ ಹುಲಿ ಸರ್ಕಾರ : ಸುನಿಲ್‌ ಕುಮಾರ್‌ -Vishwanews24

ಬೆಂಗಳೂರು: ‘ನಮ್ಮದು ಹೇಡಿ ಸರ್ಕಾರವಲ್ಲ, ರಾಜಾ ಹುಲಿ ಸರ್ಕಾರ. ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ’ ಎಂದು ಸರ್ಕಾರದ ಮುಖ್ಯ ಸಚೇತಕ ಸುನಿಲ್‌ ಕುಮಾರ್‌ ಹೇಳಿದರು.

ವಿಧಾನಸಭೆಯಲ್ಲಿ ಮಂಗಳೂರು ಗೋಲಿಬಾರ್‌ ಪ್ರಕರಣದ ಕುರಿತು ಮಾತನಾಡಿದ ಅವರು, ವಿರೋಧ ಪಕ್ಷಗಳು ಈ ಸಂಘಟನೆಗಳ ಪರವಾಗಿ ಮಾತನಾಡುವ ಮೂಲಕ ಪೊಲೀಸರ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

‘ಪ್ರಕರಣದ ಬಗ್ಗೆ ಮ್ಯಾಜಿಸ್ಟ್ರೇಟ್‌ ತನಿಖೆ ಮುಗಿಯುವ ಮೊದಲೇ ವಿರೋಧ ಪಕ್ಷದವರು ಗಲಭೆಕೋರರಿಗೆ ಅಮಾಯಕರು ಎಂಬ ಪ್ರಮಾಣ ಪತ್ರವನ್ನು ನೀಡಿದ್ದಾರೆ. ಗಲಭೆ ಹಿಂದಿನ ಶಕ್ತಿಗಳು ಸೌದಿ ಅರೇಬಿಯಾದಲ್ಲಿದ್ದು, ಅವರು ನಮಗೆ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಈ ರೀತಿ ಬೆದರಿಕೆ ಹಾಕುತ್ತಿರುವವರು ಯಾರು? ಇವರನ್ನು ನೀವು ಏಕೆ ಸಮರ್ಥಿಸುತ್ತೀರಿ’ ಎಂದು ಸುನಿಲ್‌ ಪ್ರಶ್ನಿಸಿದರು.

‘ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎರಡು– ಮೂರು ಸಂಘಟನೆಗಳು ಅಶಾಂತಿಯ ವಾತಾವರಣ ಸೃಷ್ಟಿಸಿವೆ.ಡಿ.17 ರಂದು ಕಾಂಗ್ರೆಸ್‌ ಶಾಸಕ ಖಾದರ್ ಅವರು ಸಿಎಎ ಜಾರಿ ಮಾಡಿದರೆ ದೇಶ ಹೊತ್ತಿ ಉರಿಯುತ್ತದೆ ಎಂದು ಹೇಳಿಕೆ ನೀಡಿದ್ದೇ ಡಿ.19ರ ಗಲಭೆಗೆ ಪ್ರಚೋದನೆ ಆಯಿತು. ಆ ಗಲಭೆಗೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರಣವಾಗಿವೆ’ ಎಂದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago