ದಕ್ಷಿಣ ಕನ್ನಡ

ನಮ್ಮನ್ನು ಕಟ್ಟಿ ಹಾಕಿ ಚುನಾವಣೆ ಮಾಡಿದಂತಿತ್ತು- ರಮಾನಾಥ ರೈ

ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಕೊಟ್ಟ ಭರವಸೆಯನ್ನು ಈಡೇರಿಸುವ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮಾಡುವುದೇ ಪ್ರಮುಖವಾಗಿರುತ್ತದೆ. ಚುನಾವಣೆ ಅಂದ್ರೆ ನಾವು ಕೆಲಸ ಮಾಡಿದ್ದಕ್ಕೆ ಮೌಲ್ಯಮಾಪನವಾಗಿರುತ್ತದೆ ಅಂತ ಸಚಿವ ರಮಾನಾಥ ರೈ ತಿಳಿಸಿದ್ದಾರೆ.

ಚುನಾವಣಾ ಫಲಿತಾಂಶದ ಬಳಿ  ಮಾತನಾಡಿದ ಅವರು, ಇಂದು ಯಾವ ಕಾರಣಕ್ಕೆ ಸೋಲಾಗಿದೆ ಎಂಬುದು ಗೊತ್ತಾಗ್ತಿಲ್ಲ. ಆದ್ರೆ ನಾವು ಇಲ್ಲಿಯವರೆಗೆ ಮಾಡುತ್ತಿದ್ದಂತಹ ಸಮಸ್ಯೆಯನ್ನೇ ಮುಂದುವರೆಸಿಕೊಂಡು ಹೋಗ್ತಾ ಇದ್ದೇವೆ. ಇವಿಎಂ ಮೆಷಿನ್ ಬಗ್ಗೆಯೂ ನಮಗೆ ಸ್ವಲ್ಪ ಸಂಶಯವಿದೆ ಅಂದ್ರು.

ಚುನಾವಣೆ ನಡೆಯುತ್ತಿದ್ದಾಗ ಕೆಲವು ಅಭ್ಯರ್ಥಿಗಳ ಮನೆ ಮೇಲೆ ಐಟಿ ದಾಳಿ ಮಾಡಲಾಗಿದೆ. ನಾನು ನನ್ನ ಜೀವಮಾನದಲ್ಲಿ ಎಷ್ಟೋ ಚುನಾವಣೆಯಲ್ಲಿ ಸ್ಫರ್ಧಿಸಿದ್ದೇನೆ. ಆದ್ರೆ ಅಭ್ಯರ್ಥಿಗಳ ಮನೆ ಮೇಲೆ ಐಟಿ ದಾಳಿ ಮಾಡುವುದನ್ನು ನೋಡಿರಲಿಲ್ಲ. ಒಟ್ಟಿನಲ್ಲಿ ಈ ಮೂಲಕ ನಮ್ಮನ್ನು ಕಟ್ಟಿ ಹಾಕಿ ಚುನಾವಣೆ ಮಾಡಿದಂತಾಗಿದೆ ಅಂತ ಅವರು ಹೇಳಿದ್ರು.

ಬಂಟ್ವಾಳದಲ್ಲಿ ಹಲವರ ಮೇಲೆ ಹಲ್ಲೆಯಾಗಿದೆ. ಹರೀಶ್ ಪೂಜಾರಿ ಎಂಬ ಹಿಂದೂ ಯುವಕನ ಮೇಲೆಯೂ ಸಂಘಪರಿವಾರದವರು ಹಲ್ಲೆ, ಹತ್ಯೆ ಮಾಡಿದ್ದಾರೆ. ಅಲ್ಲದೇ ಕೆಲವರ ಹತ್ಯೆಯಾಗಿದೆ. ಇದಕ್ಕೆ ಕಾಂಗ್ರೆಸ್ಸಿನವರು ಕಾರಣರಲ್ಲ. ಅಪಪ್ರಚಾರ ಮಾಡುತ್ತಾರೆ ಅದಕ್ಕೇನೂ ಮಾಡಕ್ಕಾಗಲ್ಲ. ಹತ್ಯೆ ಪ್ರಕರಣಗಳಲ್ಲಿ ಸಂಘಪರಿವಾರದವರು ಮತ್ತು ಎಸ್‍ಡಿಪಿಐಯವರು ಇದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷದ ಸದಸ್ಯರು ಯಾರು ಇಲ್ಲ. ಒಟ್ಟಿನಲ್ಲಿ ನಮ್ಮ ಕಡೆ ಬೆರಳು ತೋರಿಸುವಂತದ್ದು ಸಮಂಜಸವಲ್ಲ ಅಂತ ಹಿಂದೂಗಳ ಮೇಲಿನ ಹಲ್ಲೆ ಹಾಗೂ ಕೊಲೆಯೇ ಸೋಲಿಗೆ ಕಾರಣ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ್ರು.

ಈ ಬಾರಿಯ ಚುನಾವಣೆಯಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದ್ದ ಬಂಟ್ವಾಳ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ರಮಾನಾಥ ರೈ ಹಿನ್ನಡೆ ಸಾಧಿಸಿದ್ದಾರೆ. ಇವರು ಬಿಜೆಪಿಯ ಯು.ರಾಜೇಶ್ ನಾಯ್ಕ್ ವಿರುದ್ಧ ಸ್ಪರ್ಧಿಸಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

12 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

15 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago