ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಕೊಟ್ಟ ಭರವಸೆಯನ್ನು ಈಡೇರಿಸುವ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮಾಡುವುದೇ ಪ್ರಮುಖವಾಗಿರುತ್ತದೆ. ಚುನಾವಣೆ ಅಂದ್ರೆ ನಾವು ಕೆಲಸ ಮಾಡಿದ್ದಕ್ಕೆ ಮೌಲ್ಯಮಾಪನವಾಗಿರುತ್ತದೆ ಅಂತ ಸಚಿವ ರಮಾನಾಥ ರೈ ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶದ ಬಳಿ ಮಾತನಾಡಿದ ಅವರು, ಇಂದು ಯಾವ ಕಾರಣಕ್ಕೆ ಸೋಲಾಗಿದೆ ಎಂಬುದು ಗೊತ್ತಾಗ್ತಿಲ್ಲ. ಆದ್ರೆ ನಾವು ಇಲ್ಲಿಯವರೆಗೆ ಮಾಡುತ್ತಿದ್ದಂತಹ ಸಮಸ್ಯೆಯನ್ನೇ ಮುಂದುವರೆಸಿಕೊಂಡು ಹೋಗ್ತಾ ಇದ್ದೇವೆ. ಇವಿಎಂ ಮೆಷಿನ್ ಬಗ್ಗೆಯೂ ನಮಗೆ ಸ್ವಲ್ಪ ಸಂಶಯವಿದೆ ಅಂದ್ರು.
ಚುನಾವಣೆ ನಡೆಯುತ್ತಿದ್ದಾಗ ಕೆಲವು ಅಭ್ಯರ್ಥಿಗಳ ಮನೆ ಮೇಲೆ ಐಟಿ ದಾಳಿ ಮಾಡಲಾಗಿದೆ. ನಾನು ನನ್ನ ಜೀವಮಾನದಲ್ಲಿ ಎಷ್ಟೋ ಚುನಾವಣೆಯಲ್ಲಿ ಸ್ಫರ್ಧಿಸಿದ್ದೇನೆ. ಆದ್ರೆ ಅಭ್ಯರ್ಥಿಗಳ ಮನೆ ಮೇಲೆ ಐಟಿ ದಾಳಿ ಮಾಡುವುದನ್ನು ನೋಡಿರಲಿಲ್ಲ. ಒಟ್ಟಿನಲ್ಲಿ ಈ ಮೂಲಕ ನಮ್ಮನ್ನು ಕಟ್ಟಿ ಹಾಕಿ ಚುನಾವಣೆ ಮಾಡಿದಂತಾಗಿದೆ ಅಂತ ಅವರು ಹೇಳಿದ್ರು.
ಬಂಟ್ವಾಳದಲ್ಲಿ ಹಲವರ ಮೇಲೆ ಹಲ್ಲೆಯಾಗಿದೆ. ಹರೀಶ್ ಪೂಜಾರಿ ಎಂಬ ಹಿಂದೂ ಯುವಕನ ಮೇಲೆಯೂ ಸಂಘಪರಿವಾರದವರು ಹಲ್ಲೆ, ಹತ್ಯೆ ಮಾಡಿದ್ದಾರೆ. ಅಲ್ಲದೇ ಕೆಲವರ ಹತ್ಯೆಯಾಗಿದೆ. ಇದಕ್ಕೆ ಕಾಂಗ್ರೆಸ್ಸಿನವರು ಕಾರಣರಲ್ಲ. ಅಪಪ್ರಚಾರ ಮಾಡುತ್ತಾರೆ ಅದಕ್ಕೇನೂ ಮಾಡಕ್ಕಾಗಲ್ಲ. ಹತ್ಯೆ ಪ್ರಕರಣಗಳಲ್ಲಿ ಸಂಘಪರಿವಾರದವರು ಮತ್ತು ಎಸ್ಡಿಪಿಐಯವರು ಇದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷದ ಸದಸ್ಯರು ಯಾರು ಇಲ್ಲ. ಒಟ್ಟಿನಲ್ಲಿ ನಮ್ಮ ಕಡೆ ಬೆರಳು ತೋರಿಸುವಂತದ್ದು ಸಮಂಜಸವಲ್ಲ ಅಂತ ಹಿಂದೂಗಳ ಮೇಲಿನ ಹಲ್ಲೆ ಹಾಗೂ ಕೊಲೆಯೇ ಸೋಲಿಗೆ ಕಾರಣ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ್ರು.
ಈ ಬಾರಿಯ ಚುನಾವಣೆಯಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದ್ದ ಬಂಟ್ವಾಳ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ರಮಾನಾಥ ರೈ ಹಿನ್ನಡೆ ಸಾಧಿಸಿದ್ದಾರೆ. ಇವರು ಬಿಜೆಪಿಯ ಯು.ರಾಜೇಶ್ ನಾಯ್ಕ್ ವಿರುದ್ಧ ಸ್ಪರ್ಧಿಸಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…