Featured

ನಮ್ಮಲ್ಲಿ ಕಚ್ಚಾಟವಿಲ್ಲ ,ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ  : ರೇವಣ್ಣ -Vishwanews24

ನಮ್ಮಲ್ಲಿ ಕಚ್ಚಾಟವಿಲ್ಲ ,ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ  : ರೇವಣ್ಣ -Vishwanews24

ಇದು ದಪ್ಪ, ಎಮ್ಮೆ ಚರ್ಮದ ಸರ್ಕಾರ..

ಸರ್ಕಾರಕ್ಕೂ ಕೊರೊನಾ ಇದೆಯೋ ಗೊತ್ತಿಲ್ಲ, ಅದನ್ನು ರಿಪೇರಿ ಮಾಡಬೇಕು..

ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೇ ಜೆಡಿಎಸ್ ಮುಖ್ಯಮಂತ್ರಿ ಅಭ್ಯರ್ಥಿ. ನಮ್ಮಲ್ಲಿ ಕಚ್ಚಾಟವಿಲ್ಲ, ಆರಾಮಾಗಿದ್ದೇವೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅಧಿಕಾರ ಕೊಟ್ಟರೆ ಒಳ್ಳೆಯ ಕೆಲಸ ಮಾಡುತ್ತೇವೆ, ಇಲ್ಲ ಸುಮ್ಮನ್ನಿರುತ್ತೇವೆ. ಈ ಹಿಂದೆ ಅಧಿಕಾರ ಕೊಟ್ಟಿದ್ದರು 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇವೆ. ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ನಾನು ಮುಖ್ಯಮಂತ್ರಿ ಎಂದು ಒಬ್ಬರಿಗೊಬ್ಬರು ಹೊಡೆದಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಆ ರೀತಿ ಇಲ್ಲ ಎಂದು ತಿಳಿಸಿದರು.

ಕೋವಿಡ್ ಹೆಸರಿನಲ್ಲಿ ಗ್ರಾ.ಪಂ. ಅನುದಾನವನ್ನು ಕಡಿತ ಮಾಡಿದ್ದಾರೆ, ಎಂಎಲ್‍ಎ ಅನುದಾನವನ್ನು ಕೊಟ್ಟಿಲ್ಲ. ಗ್ರಾಮ ಪಂಚಾಯಿತಿಯ ಹಕ್ಕನ್ನು ಕಸಿದುಕೊಳ್ಳಬೇಡಿ. ಸರ್ಕಾರ ಇದನ್ನು ಸರಿಪಡಿಸದಿದ್ದರೆ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಒಳಗೊಂಡಂತೆ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿ, ನಂತರ ರಾಜ್ಯಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಸರ್ಕಾರಕ್ಕೆ ನಾಚಿಕೆಯಾಗಬೇಕು, ಇದನ್ನು ಸರ್ಕಾರ ಎನ್ನುತ್ತಾರಾ? ಸರ್ಕಾರ ಲೂಟಿಕೋರರ ಕೈಸೇರಿದೆ, ಕೊರೊನಾ ಹೆಸರಿನಲ್ಲಿ ರಾಜ್ಯದಲ್ಲಿ ಲೂಟಿ ನಡೆಯುತ್ತಿದೆ. ಮೋದಿಯವರೇ ಸರ್ಕಾರವನ್ನು ಲೂಟಿಕೋರರ ಕೈಗೆ ಕೊಟ್ಟಿದ್ದೀರಾ, ಕೇಂದ್ರ ಸರ್ಕಾರ ನೀಡುವ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮುಕ್ತ ಮಾಡುತ್ತೇನೆ, ಅಚ್ಛೆ ದಿನ್ ಬರುತ್ತೆ ಎಂದು ಮೋದಿ ಹೇಳುತ್ತಾರೆ. ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ತರಿಸಿಕೊಳ್ಳಿ. ಇದು ದಪ್ಪ, ಎಮ್ಮೆ ಚರ್ಮದ ಸರ್ಕಾರ. ಸರ್ಕಾರಕ್ಕೂ ಕೊರೊನಾ ಇದೆಯೋ ಗೊತ್ತಿಲ್ಲ, ಅದನ್ನು ರಿಪೇರಿ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

6 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

20 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

20 hours ago